ಪುತ್ತೂರಿನ ದರ್ಬೆಯಲ್ಲಿ ಮುಖ್ಯ ರಸ್ತೆ ಬದಿಯ ವಾಣಿಜ್ಯ ಸಂಕೀರ್ಣವೊಂದರ ಪ್ರಥಮ ಮಹಡಿಯಲ್ಲಿರುವ ಎಲೆಕ್ಟ್ರಿಕಲ್ಸ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದೆ.
ದರ್ಬೆಯ ರೇಗೋ ಬಿಲ್ಡಿಂಗ್ನ ಪ್ರಥಮ ಮಹಡಿಯಲ್ಲಿ ಕಾರ್ಯಚರಿಸುತ್ತಿರುವ ಕೆಮ್ಮಿಂಜೆ ಗ್ರಾಮದ ಬೆದ್ರಾಳ ನಿವಾಸಿ, ಕೆಮ್ಮಿಂಜೆ ಪಣ್ಮುಖ ಸುಬ್ರಹ್ಮಣ್ಯ-ಮಹಾವಿಷ್ಣು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಬೆದ್ರಾಳ ಎಂಬವರ ಮಾಲಕತ್ವದ ನಂದಿಕೇಶ್ವರ ಎಲೆಕ್ಟ್ರಿಕಲ್ಸ್ ಸಂಸ್ಥೆಯ ಸರ್ವಿಸ್ ವಿಭಾಗದಲ್ಲಿ ಮಂಗಳವಾರ ಮಧ್ಯಾಹ್ನ ದಟ್ಟ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸಂಸ್ಥೆಯ ನೌಕರರು ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರೆಂದು ತಿಳಿದು ಬಂದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ಅಂಗಡಿಯೊಳಗಿದ್ದ ಹಲವು ಎಲೆಕ್ಟ್ರಿಕಲ್ಸ್ ಉಪಕರಣಗಳು ಮತ್ತು ಸಾಧನಗಳು ಸುಟ್ಟು ಹೋಗಿವೆ. ಘಟನೆಯಿಂದಾಗಿ ಸುಮಾರು ರೂ.3 ಲಕ್ಷದಷ್ಟು ನಷ್ಟ ಸಂಭವಿಸಿರುವುದಾಗಿ ಮಾಲಕ ಕೇಶವ ಬೆದ್ರಾಳ ಅವರು ತಿಳಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…