ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ, ರಾಜ್ಯದ ಜನರ ಸಾಮಾಜಿಕ ಭದ್ರತೆಗೆ ಅಗ್ರಹಿಸಿ ಜೂನ್ 23ರಂದು ಸ್ಥಳೀಯಾಡಳಿತ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.
ಇವರು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಎಲ್ಲಾ ಗ್ರಾಮ ಪಂಚಾಯತ್, ನಗರ ಸಭೆ, ಪರ ಸಭೆ, ಪಟ್ಟಣ ಪಂಚಾಯತ್ ಮುಂಭಾಗ ಸ್ಥಳೀಯ ನಾಗರಿಕರನ್ನು ಸೇರಿಸಿ ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಕೆಡಿಪಿ ಸಭೆ, ವಿಧಾನ ಸಭೆ ಅಧಿವೇಶದಲ್ಲಿ ಮನವಿ ಮಾಡಿದ್ರೂ ಜನತೆಯ ಸಮಸ್ಯೆ ನಿವಾರಣೆಯಾಗುತ್ತಿಲ್ಲ. ನೈನ್ಲೆವೆನ್ ಅರ್ಜಿ ದೂಳು ಹಿಡಿಯುತ್ತಿದೆ. ಅಕ್ರಮ ನಕ್ರಮ ಯೋಜನೆಯ ನಿಯಮಗಳನ್ನು ಸರಳೀಕರಣಗೊಳಿಸದಿರುವುದು ನರ್ಕಾರದ ರೈತ ವಿರೋಧೀ ನಿಲುವಾಗಿದೆ. ಸರ್ಕಾರ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದು ನರಿಯಲ್ಲ ಎಂದು ಆರೋಪಿಸಿದ್ರು. ಕುಮ್ಮಿ ಭೂಮಿ ಉಳಿದಿದ್ದು ರೈತರಿಂದ. ಇಲ್ಲದೇ ಹೋಗಿದ್ದರೆ ಆ ಭೂಮಿ ಭೂಮಾಫಿಯಾಕ್ಕೆ ಹೋಗುತ್ತಿತ್ತು. ಆಶ್ರಯ ಮನೆ ಸಮಸ್ಯೆಯಿಂದ ಬಡವರಿಗೆ ಸೂರು ಸಿಗುತ್ತಿಲ್ಲ. ಬಿಜೆಪಿ ಸರ್ಕಾರ ಬಿಜೆಪಿ 100 ರಷ್ಟು ಮನೆ ಕೊಟ್ಟಿದೆ. ಆದರೆ ಕಾಂಗ್ರೆಸ್ ಎರಡು ವರ್ಷಗಳಿಂದ ಆಶ್ರಯ ಮನೆ ಕೊಟ್ಟಿಲ್ಲ. ಪ್ರತೀ ಪಂಚಾಯತ್ ವ್ಯಾಪ್ತಿಯಲ್ಲಿ ಕನಿಷ್ಠ 100 ಮನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಸಭೆಯಲ್ಲಿ ಮುಖಂಡರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಶಾಂತಿ ಪ್ರಸಾದ್ ಹೆಗ್ಡೆ, ಪೂರ್ಣಿಮಾ ಎಂ, ಪ್ರಭಾಕರ ಪ್ರಭು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…