ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ, ರಾಜ್ಯದ ಜನರ ಸಾಮಾಜಿಕ ಭದ್ರತೆಗೆ ಅಗ್ರಹಿಸಿ ಜೂನ್ 23ರಂದು ಸ್ಥಳೀಯಾಡಳಿತ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.
ಇವರು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಎಲ್ಲಾ ಗ್ರಾಮ ಪಂಚಾಯತ್, ನಗರ ಸಭೆ, ಪರ ಸಭೆ, ಪಟ್ಟಣ ಪಂಚಾಯತ್ ಮುಂಭಾಗ ಸ್ಥಳೀಯ ನಾಗರಿಕರನ್ನು ಸೇರಿಸಿ ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಕೆಡಿಪಿ ಸಭೆ, ವಿಧಾನ ಸಭೆ ಅಧಿವೇಶದಲ್ಲಿ ಮನವಿ ಮಾಡಿದ್ರೂ ಜನತೆಯ ಸಮಸ್ಯೆ ನಿವಾರಣೆಯಾಗುತ್ತಿಲ್ಲ. ನೈನ್ಲೆವೆನ್ ಅರ್ಜಿ ದೂಳು ಹಿಡಿಯುತ್ತಿದೆ. ಅಕ್ರಮ ನಕ್ರಮ ಯೋಜನೆಯ ನಿಯಮಗಳನ್ನು ಸರಳೀಕರಣಗೊಳಿಸದಿರುವುದು ನರ್ಕಾರದ ರೈತ ವಿರೋಧೀ ನಿಲುವಾಗಿದೆ. ಸರ್ಕಾರ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದು ನರಿಯಲ್ಲ ಎಂದು ಆರೋಪಿಸಿದ್ರು. ಕುಮ್ಮಿ ಭೂಮಿ ಉಳಿದಿದ್ದು ರೈತರಿಂದ. ಇಲ್ಲದೇ ಹೋಗಿದ್ದರೆ ಆ ಭೂಮಿ ಭೂಮಾಫಿಯಾಕ್ಕೆ ಹೋಗುತ್ತಿತ್ತು. ಆಶ್ರಯ ಮನೆ ಸಮಸ್ಯೆಯಿಂದ ಬಡವರಿಗೆ ಸೂರು ಸಿಗುತ್ತಿಲ್ಲ. ಬಿಜೆಪಿ ಸರ್ಕಾರ ಬಿಜೆಪಿ 100 ರಷ್ಟು ಮನೆ ಕೊಟ್ಟಿದೆ. ಆದರೆ ಕಾಂಗ್ರೆಸ್ ಎರಡು ವರ್ಷಗಳಿಂದ ಆಶ್ರಯ ಮನೆ ಕೊಟ್ಟಿಲ್ಲ. ಪ್ರತೀ ಪಂಚಾಯತ್ ವ್ಯಾಪ್ತಿಯಲ್ಲಿ ಕನಿಷ್ಠ 100 ಮನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಸಭೆಯಲ್ಲಿ ಮುಖಂಡರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಶಾಂತಿ ಪ್ರಸಾದ್ ಹೆಗ್ಡೆ, ಪೂರ್ಣಿಮಾ ಎಂ, ಪ್ರಭಾಕರ ಪ್ರಭು ಉಪಸ್ಥಿತರಿದ್ದರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…