ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮರವಂತೆಯ ಸೌಪರ್ಣಿಕ ನದಿಯಲ್ಲಿ ಸಾಹಸಿ ಮಹಿಳೆಯೊಬ್ಬಳು ದೋಣಿ ಮುನ್ನಡೆಸಿ ಜನರನ್ನು ದಡ ಮುಟ್ಟಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದಾಳೆ.
ಸೇತುವೆಯಿಲ್ಲದ ಸೌಪರ್ಣಿಕ ನದಿಯನ್ನು ದಾಟಿ ಹೊರಜಗತ್ತಿನ ಸಂಪರ್ಕ ಪಡೆಯಲು ಈ ಮಹಿಳೆ ನೆರವಾಗುತ್ತಿದ್ದಾಳೆ. ಹಗಲಲ್ಲಿ ಪುರುಷರು ಕೆಲಸದ ನಿಮಿತ್ತ ಹೋಗುವ ಕಾರಣ ತಾನೇ ದೋಣಿ ಮುನ್ನಡೆಸುವ ಕಾಯಕ ಕೈಗೆತ್ತಿಕೊಂಡು ಶಾಲಾ ಮಕ್ಕಳು ಮತ್ತು ಊರಿನ ಜನರನ್ನ ನದಿ ದಾಟಿಸುತ್ತಿದ್ದಾಳೆ. ಸೌಪರ್ಣಿಕ ನದಿಯ ಸೇತುವೆ ನಿರ್ಮಾಣದ ಕುರಿತು ಊರಿನವರು ದಶಕಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಕುರಿತು ಜನಪ್ರತಿನಿಧಿಗಳು ಇನ್ನೂ ಮೌನವಾಗಿರುವುದು ವಿಪರ್ಯಾಸ. ಮಳೆಗಾಲದಲ್ಲಿ ತುಂಬಿ ಹರಿಯುವ ನದಿಯಲ್ಲಿ ದೋಣಿಯ ಮೂಲಕ ರಸ್ತೆ ದಾಟುವುದರಿಂದ ಅಪಾಯವೇ ಹೆಚ್ಚು. ಆದ್ದರಿಂದ ಇನ್ನಾದರೂ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಲಿ ಎಂಬುದು ಊರವರ ಒಕ್ಕೊರಲಿನ ಕೂಗು. ಸದ್ಯ ಮಹಿಳೆಯ ಸಾಹಸಿ ಕಾರ್ಯಕ್ಕೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…