ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮರವಂತೆಯ ಸೌಪರ್ಣಿಕ ನದಿಯಲ್ಲಿ ಸಾಹಸಿ ಮಹಿಳೆಯೊಬ್ಬಳು ದೋಣಿ ಮುನ್ನಡೆಸಿ ಜನರನ್ನು ದಡ ಮುಟ್ಟಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದಾಳೆ.
ಸೇತುವೆಯಿಲ್ಲದ ಸೌಪರ್ಣಿಕ ನದಿಯನ್ನು ದಾಟಿ ಹೊರಜಗತ್ತಿನ ಸಂಪರ್ಕ ಪಡೆಯಲು ಈ ಮಹಿಳೆ ನೆರವಾಗುತ್ತಿದ್ದಾಳೆ. ಹಗಲಲ್ಲಿ ಪುರುಷರು ಕೆಲಸದ ನಿಮಿತ್ತ ಹೋಗುವ ಕಾರಣ ತಾನೇ ದೋಣಿ ಮುನ್ನಡೆಸುವ ಕಾಯಕ ಕೈಗೆತ್ತಿಕೊಂಡು ಶಾಲಾ ಮಕ್ಕಳು ಮತ್ತು ಊರಿನ ಜನರನ್ನ ನದಿ ದಾಟಿಸುತ್ತಿದ್ದಾಳೆ. ಸೌಪರ್ಣಿಕ ನದಿಯ ಸೇತುವೆ ನಿರ್ಮಾಣದ ಕುರಿತು ಊರಿನವರು ದಶಕಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಕುರಿತು ಜನಪ್ರತಿನಿಧಿಗಳು ಇನ್ನೂ ಮೌನವಾಗಿರುವುದು ವಿಪರ್ಯಾಸ. ಮಳೆಗಾಲದಲ್ಲಿ ತುಂಬಿ ಹರಿಯುವ ನದಿಯಲ್ಲಿ ದೋಣಿಯ ಮೂಲಕ ರಸ್ತೆ ದಾಟುವುದರಿಂದ ಅಪಾಯವೇ ಹೆಚ್ಚು. ಆದ್ದರಿಂದ ಇನ್ನಾದರೂ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಲಿ ಎಂಬುದು ಊರವರ ಒಕ್ಕೊರಲಿನ ಕೂಗು. ಸದ್ಯ ಮಹಿಳೆಯ ಸಾಹಸಿ ಕಾರ್ಯಕ್ಕೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…