ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮರವಂತೆಯ ಸೌಪರ್ಣಿಕ ನದಿಯಲ್ಲಿ ಸಾಹಸಿ ಮಹಿಳೆಯೊಬ್ಬಳು ದೋಣಿ ಮುನ್ನಡೆಸಿ ಜನರನ್ನು ದಡ ಮುಟ್ಟಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದಾಳೆ.
ಸೇತುವೆಯಿಲ್ಲದ ಸೌಪರ್ಣಿಕ ನದಿಯನ್ನು ದಾಟಿ ಹೊರಜಗತ್ತಿನ ಸಂಪರ್ಕ ಪಡೆಯಲು ಈ ಮಹಿಳೆ ನೆರವಾಗುತ್ತಿದ್ದಾಳೆ. ಹಗಲಲ್ಲಿ ಪುರುಷರು ಕೆಲಸದ ನಿಮಿತ್ತ ಹೋಗುವ ಕಾರಣ ತಾನೇ ದೋಣಿ ಮುನ್ನಡೆಸುವ ಕಾಯಕ ಕೈಗೆತ್ತಿಕೊಂಡು ಶಾಲಾ ಮಕ್ಕಳು ಮತ್ತು ಊರಿನ ಜನರನ್ನ ನದಿ ದಾಟಿಸುತ್ತಿದ್ದಾಳೆ. ಸೌಪರ್ಣಿಕ ನದಿಯ ಸೇತುವೆ ನಿರ್ಮಾಣದ ಕುರಿತು ಊರಿನವರು ದಶಕಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಕುರಿತು ಜನಪ್ರತಿನಿಧಿಗಳು ಇನ್ನೂ ಮೌನವಾಗಿರುವುದು ವಿಪರ್ಯಾಸ. ಮಳೆಗಾಲದಲ್ಲಿ ತುಂಬಿ ಹರಿಯುವ ನದಿಯಲ್ಲಿ ದೋಣಿಯ ಮೂಲಕ ರಸ್ತೆ ದಾಟುವುದರಿಂದ ಅಪಾಯವೇ ಹೆಚ್ಚು. ಆದ್ದರಿಂದ ಇನ್ನಾದರೂ ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಲಿ ಎಂಬುದು ಊರವರ ಒಕ್ಕೊರಲಿನ ಕೂಗು. ಸದ್ಯ ಮಹಿಳೆಯ ಸಾಹಸಿ ಕಾರ್ಯಕ್ಕೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…