ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಮಾಡ್ನೂರು ಗ್ರಾಮದಲ್ಲಿ ಸುಮಾರು 1.66 ಕೋಟಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ..!

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಯೋಜನೆ ಯಸಶ್ವಿಯಾಗಿ ಮುನ್ನಡೆಯುತ್ತಿದ್ದು ಇದರಿಂದ ಬಿಜೆಪಿ ವಿಚಲಿತಗೊಂಡಿದ್ದು ಮಾತ್ರವಲ್ಲದೆ ಗ್ಯಾರಂಟಿ ನೀಡಿದ್ದರಿಂದ ಇತರೆ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ ಎಂಬ ಸುಳ್ಳು ಆರೋಪವನ್ನು ಮಾಡುತ್ತಿದೆ, ಕೇವಲ ಗೃಹಲಕ್ಷ್ಮಿ ಯೋಜನೆಯಿಂದ ಪ್ರತೀ ಕುಟುಂಬದ ಯಜಮಾನಿಯ ಖಾತೆಗೆ 42 ಸಾವಿರ ರೂ ಜಮೆಯಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.

ಅವರು ಮಾಡ್ನೂರು ಗ್ರಾಮದಲ್ಲಿ ಸುಮಾರು 1.66 ಕೋಟಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಬಳಿಕ ಕಾವು ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಬಡವರು, ಮಧ್ಯಮವರ್ಗದ ಜನರು ನೆಮ್ಮದಿಯ ಜೀವನ ನಡೆಸುವಂತಾಗಿದೆ. ಏನಿಲ್ಲದಿದ್ದರೂ ತಿಂಗಳಿಗೆ ಬರುವ 2000 ರೂ ಗೃಹಲಕ್ಷ್ಮಿ ಹಣ ಮಹಿಳೆಯನ್ನು ಸ್ವಾವವಲಂಬಿಯನ್ನಾಗಿಸಿದೆ. ಜನತೆ ಅಭಿವೃದ್ದಿಯಾಗುತ್ತಿದ್ದಾರೆ, ಇನ್ನು ಕಾಂಗ್ರೆಸ್ ಪಕ್ಷ ನೆಮ್ಮದಿಯಲ್ಲಿರುವುದನ್ನು ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಈ ಕಾರಣಕ್ಕೆ ಪಂಚ ಗ್ಯಾರಂಟಿ ಯೋಜನೆಯ ಬಗ್ಗೆ ಅಪಪ್ರಚಾರ ಮಾಡುತ್ತಾ ಅದನ್ನು ರದ್ದು ಮಾಡಬೇಕು ಎಂದು ಒತ್ತಾಯವನ್ನು ಮಾಡುತ್ತಿದೆ ಎಂದು ಆರೋಪಿಸಿದ್ರು. ಇನ್ನು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಕೊಳ್ತಿಗೆ ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ, ಪುಡಾ ಅಧ್ಯಕ್ಷರಾದ ಅಮಲರಾಮಚಂದ್ರ, ಸದಸ್ಯರಾದ ಲ್ಯಾನ್ಸಿ ಮಸ್ಕರೇನಸ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!