ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಮಾಡ್ನೂರು ಗ್ರಾಮದಲ್ಲಿ ಸುಮಾರು 1.66 ಕೋಟಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ..!

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಯೋಜನೆ ಯಸಶ್ವಿಯಾಗಿ ಮುನ್ನಡೆಯುತ್ತಿದ್ದು ಇದರಿಂದ ಬಿಜೆಪಿ ವಿಚಲಿತಗೊಂಡಿದ್ದು ಮಾತ್ರವಲ್ಲದೆ ಗ್ಯಾರಂಟಿ ನೀಡಿದ್ದರಿಂದ ಇತರೆ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ ಎಂಬ ಸುಳ್ಳು ಆರೋಪವನ್ನು ಮಾಡುತ್ತಿದೆ, ಕೇವಲ ಗೃಹಲಕ್ಷ್ಮಿ ಯೋಜನೆಯಿಂದ ಪ್ರತೀ ಕುಟುಂಬದ ಯಜಮಾನಿಯ ಖಾತೆಗೆ 42 ಸಾವಿರ ರೂ ಜಮೆಯಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.

ಅವರು ಮಾಡ್ನೂರು ಗ್ರಾಮದಲ್ಲಿ ಸುಮಾರು 1.66 ಕೋಟಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಬಳಿಕ ಕಾವು ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಬಡವರು, ಮಧ್ಯಮವರ್ಗದ ಜನರು ನೆಮ್ಮದಿಯ ಜೀವನ ನಡೆಸುವಂತಾಗಿದೆ. ಏನಿಲ್ಲದಿದ್ದರೂ ತಿಂಗಳಿಗೆ ಬರುವ 2000 ರೂ ಗೃಹಲಕ್ಷ್ಮಿ ಹಣ ಮಹಿಳೆಯನ್ನು ಸ್ವಾವವಲಂಬಿಯನ್ನಾಗಿಸಿದೆ. ಜನತೆ ಅಭಿವೃದ್ದಿಯಾಗುತ್ತಿದ್ದಾರೆ, ಇನ್ನು ಕಾಂಗ್ರೆಸ್ ಪಕ್ಷ ನೆಮ್ಮದಿಯಲ್ಲಿರುವುದನ್ನು ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಈ ಕಾರಣಕ್ಕೆ ಪಂಚ ಗ್ಯಾರಂಟಿ ಯೋಜನೆಯ ಬಗ್ಗೆ ಅಪಪ್ರಚಾರ ಮಾಡುತ್ತಾ ಅದನ್ನು ರದ್ದು ಮಾಡಬೇಕು ಎಂದು ಒತ್ತಾಯವನ್ನು ಮಾಡುತ್ತಿದೆ ಎಂದು ಆರೋಪಿಸಿದ್ರು. ಇನ್ನು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಕೊಳ್ತಿಗೆ ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ, ಪುಡಾ ಅಧ್ಯಕ್ಷರಾದ ಅಮಲರಾಮಚಂದ್ರ, ಸದಸ್ಯರಾದ ಲ್ಯಾನ್ಸಿ ಮಸ್ಕರೇನಸ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!