ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಹೆಚ್ಚಾಗುತ್ತಿರುವ ಕಾಡಾನೆಗಳ ಸಮಸ್ಯೆಗೆ 2 ವಾರಗಳಲ್ಲಿ ನಿಯಂತ್ರಣ..!

ಕಡಬ ಮತ್ತು ಬೆಳ್ತಂಗಡಿ ತಾಲೂಕು ಪರಿಸರದಲ್ಲಿ ಹಲವು ಸಮಯದಿಂದ ಆನೆ ದಾಳಿಗೆ ಸಂಬಧಿಸಿ ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಮೂಲಕ ಜೂ.18 ರಿಂದ ಪರಿಶೀಲನೆ ನಡೆಸಿ ವರದಿ ಪಡೆದು ಕಾಡಾನೆಯ ನಿಯಂತ್ರಣ ಮತ್ತು ಸ್ಥಳಾಂತರ ಕಾರ್ಯವನ್ನು ಮುಂದಿನ 2 ವಾರದಲ್ಲಿ ಮಾಡುವುದಾಗಿ ಮಂಗಳೂರು ವಲಯದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಅವರು ಭರವಸೆ ನೀಡಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ಮಂಗಳೂರು ವಿಭಾಗ ಅಧ್ಯಕ್ಷ ಯಂ.ಜಿ.ಸತ್ಯನಾರಾಯಣ ಅವರು ತಿಳಿಸಿದ್ದಾರೆ.

ಇವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಾಡಾನೆಯ ನಿಯಂತ್ರಣ ಮತ್ತು ಸ್ಥಳಾಂತರ ಕಾರ್ಯವನ್ನು ಮುಂದಿನ 2 ವಾರದಲ್ಲಿ ಮಾಡುವುದಾಗಿ ಭರವಸೆ ನೀಡಿದ್ದು, ಈ ಮಧ್ಯೆ ಕಾಡಾನೆಯ ಹಾವಳಿಗೊಳಪಟ್ಟ ರೈತರ ಸಭೆಯನ್ನು ಅರಣ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ಪುತ್ತೂರಿನಲ್ಲಿ ಕರೆದು ನೇರ ಮಾತುಕತೆ ಹಾಗು ಮಾಹಿತಿಯನ್ನು ಪಡೆದುಕೊಳ್ಳುವ ಆಶ್ವಾಸನೆ ನೀಡಿದ್ದಾರೆ ಮುಂದಿನ ದಿನ ದ.ಕ.ಜಿಲ್ಲಾ ಪರಿಸರದಲ್ಲಿ ರೈತ ವರ್ಗದವರಿಗೆ ವನ್ಯ ಪ್ರಾಣಿಗಳಿಂದ ತೊಂದರೆ ಆದರೆ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ಇವರನ್ನು ಸಂಪರ್ಕಿಸಿದರೆ ಇಲಾಖೆಯ ಮೂಲಕ ರಕ್ಷಣೆಯನ್ನು ಕೊಡುವುದಾಗಿ ಅರಣ್ಯಸಂರಕ್ಷಣಾಧಿಕಾರಿಯವರು ಮಾಹಿತಿ ನೀಡಿದ್ದಾರೆ ಎಂದವರು ಹೇಳಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ರಾಮಪ್ರಸಾದ್, ಪುತ್ತೂರು ಅಧ್ಯಕ್ಷ ಜನಾರ್ಧನ ರೈ, ಸದಸ್ಯ ದಿವ್ಯಪ್ರಸಾದ್ ಕಾವು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!