ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಹೆಚ್ಚಾಗುತ್ತಿರುವ ಕಾಡಾನೆಗಳ ಸಮಸ್ಯೆಗೆ 2 ವಾರಗಳಲ್ಲಿ ನಿಯಂತ್ರಣ..!

ಕಡಬ ಮತ್ತು ಬೆಳ್ತಂಗಡಿ ತಾಲೂಕು ಪರಿಸರದಲ್ಲಿ ಹಲವು ಸಮಯದಿಂದ ಆನೆ ದಾಳಿಗೆ ಸಂಬಧಿಸಿ ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಮೂಲಕ ಜೂ.18 ರಿಂದ ಪರಿಶೀಲನೆ ನಡೆಸಿ ವರದಿ ಪಡೆದು ಕಾಡಾನೆಯ ನಿಯಂತ್ರಣ ಮತ್ತು ಸ್ಥಳಾಂತರ ಕಾರ್ಯವನ್ನು ಮುಂದಿನ 2 ವಾರದಲ್ಲಿ ಮಾಡುವುದಾಗಿ ಮಂಗಳೂರು ವಲಯದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಅವರು ಭರವಸೆ ನೀಡಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ಮಂಗಳೂರು ವಿಭಾಗ ಅಧ್ಯಕ್ಷ ಯಂ.ಜಿ.ಸತ್ಯನಾರಾಯಣ ಅವರು ತಿಳಿಸಿದ್ದಾರೆ.

ಇವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಾಡಾನೆಯ ನಿಯಂತ್ರಣ ಮತ್ತು ಸ್ಥಳಾಂತರ ಕಾರ್ಯವನ್ನು ಮುಂದಿನ 2 ವಾರದಲ್ಲಿ ಮಾಡುವುದಾಗಿ ಭರವಸೆ ನೀಡಿದ್ದು, ಈ ಮಧ್ಯೆ ಕಾಡಾನೆಯ ಹಾವಳಿಗೊಳಪಟ್ಟ ರೈತರ ಸಭೆಯನ್ನು ಅರಣ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ಪುತ್ತೂರಿನಲ್ಲಿ ಕರೆದು ನೇರ ಮಾತುಕತೆ ಹಾಗು ಮಾಹಿತಿಯನ್ನು ಪಡೆದುಕೊಳ್ಳುವ ಆಶ್ವಾಸನೆ ನೀಡಿದ್ದಾರೆ ಮುಂದಿನ ದಿನ ದ.ಕ.ಜಿಲ್ಲಾ ಪರಿಸರದಲ್ಲಿ ರೈತ ವರ್ಗದವರಿಗೆ ವನ್ಯ ಪ್ರಾಣಿಗಳಿಂದ ತೊಂದರೆ ಆದರೆ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ಇವರನ್ನು ಸಂಪರ್ಕಿಸಿದರೆ ಇಲಾಖೆಯ ಮೂಲಕ ರಕ್ಷಣೆಯನ್ನು ಕೊಡುವುದಾಗಿ ಅರಣ್ಯಸಂರಕ್ಷಣಾಧಿಕಾರಿಯವರು ಮಾಹಿತಿ ನೀಡಿದ್ದಾರೆ ಎಂದವರು ಹೇಳಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ರಾಮಪ್ರಸಾದ್, ಪುತ್ತೂರು ಅಧ್ಯಕ್ಷ ಜನಾರ್ಧನ ರೈ, ಸದಸ್ಯ ದಿವ್ಯಪ್ರಸಾದ್ ಕಾವು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!