ಕಡಬ ಮತ್ತು ಬೆಳ್ತಂಗಡಿ ತಾಲೂಕು ಪರಿಸರದಲ್ಲಿ ಹಲವು ಸಮಯದಿಂದ ಆನೆ ದಾಳಿಗೆ ಸಂಬಧಿಸಿ ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಮೂಲಕ ಜೂ.18 ರಿಂದ ಪರಿಶೀಲನೆ ನಡೆಸಿ ವರದಿ ಪಡೆದು ಕಾಡಾನೆಯ ನಿಯಂತ್ರಣ ಮತ್ತು ಸ್ಥಳಾಂತರ ಕಾರ್ಯವನ್ನು ಮುಂದಿನ 2 ವಾರದಲ್ಲಿ ಮಾಡುವುದಾಗಿ ಮಂಗಳೂರು ವಲಯದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಅವರು ಭರವಸೆ ನೀಡಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ಮಂಗಳೂರು ವಿಭಾಗ ಅಧ್ಯಕ್ಷ ಯಂ.ಜಿ.ಸತ್ಯನಾರಾಯಣ ಅವರು ತಿಳಿಸಿದ್ದಾರೆ.
ಇವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಾಡಾನೆಯ ನಿಯಂತ್ರಣ ಮತ್ತು ಸ್ಥಳಾಂತರ ಕಾರ್ಯವನ್ನು ಮುಂದಿನ 2 ವಾರದಲ್ಲಿ ಮಾಡುವುದಾಗಿ ಭರವಸೆ ನೀಡಿದ್ದು, ಈ ಮಧ್ಯೆ ಕಾಡಾನೆಯ ಹಾವಳಿಗೊಳಪಟ್ಟ ರೈತರ ಸಭೆಯನ್ನು ಅರಣ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ಪುತ್ತೂರಿನಲ್ಲಿ ಕರೆದು ನೇರ ಮಾತುಕತೆ ಹಾಗು ಮಾಹಿತಿಯನ್ನು ಪಡೆದುಕೊಳ್ಳುವ ಆಶ್ವಾಸನೆ ನೀಡಿದ್ದಾರೆ ಮುಂದಿನ ದಿನ ದ.ಕ.ಜಿಲ್ಲಾ ಪರಿಸರದಲ್ಲಿ ರೈತ ವರ್ಗದವರಿಗೆ ವನ್ಯ ಪ್ರಾಣಿಗಳಿಂದ ತೊಂದರೆ ಆದರೆ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ಇವರನ್ನು ಸಂಪರ್ಕಿಸಿದರೆ ಇಲಾಖೆಯ ಮೂಲಕ ರಕ್ಷಣೆಯನ್ನು ಕೊಡುವುದಾಗಿ ಅರಣ್ಯಸಂರಕ್ಷಣಾಧಿಕಾರಿಯವರು ಮಾಹಿತಿ ನೀಡಿದ್ದಾರೆ ಎಂದವರು ಹೇಳಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ರಾಮಪ್ರಸಾದ್, ಪುತ್ತೂರು ಅಧ್ಯಕ್ಷ ಜನಾರ್ಧನ ರೈ, ಸದಸ್ಯ ದಿವ್ಯಪ್ರಸಾದ್ ಕಾವು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…