ಜನ ಮನದ ನಾಡಿ ಮಿಡಿತ

Advertisement

ಪಾಣೆ ಮಂಗಳೂರು: ಹಳೆಸೇತುವೆ ಲಘುವಾಹನ ಎಂದಿನಂತೆ ಯಥಾಸ್ಥಿತಿಯಲ್ಲಿ ಸಂಚರಿಸಲು ಉಸ್ತುವಾರಿ ಸಚಿವರ ತೀರ್ಮಾನ

ಕೆಲದಿನಗಳ ಹಿಂದೆ ಬಂಟ್ವಾಳ ತಹಶೀಲ್ದಾರ್ ರವರುಸಂಬಂಧಪಟ್ಟ ಯಾವುದೇ ಇಲಾಖೆಯಿಂದ ಪಾಣೆ ಮಂಗಳೂರು ಹಳೆ ಸೇತುವೆಯಲ್ಲಿ ವಾಹನಗಳ ಸಂಚಾರವನ್ನು ನಿರ್ಭಂದಿಸಿ ಧಿಡೀರ್ ಆಗಿ ಹೊರಡಿಸಿದ ಆದೇಶದ ಬಗ್ಗೆ ಸಾರ್ವಜನಿಕರು ಜನಪ್ರತಿನಿಧಿಗಳ ಸಮ್ಮುಖದಲ್ಲಿ ಆಕ್ರೋಶ ವ್ಯಕ್ತಪಡಿಸಿ ಸಾರ್ವಜನಿಕರಿಗಾಗುವ ತೊಂದರೆಯ ಬಗ್ಗೆ ಪ್ರತಿಭಟನೆ ನಡೆಸಿದ್ದರು.

ನಂತರ ನಡೆದ ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಗಂಭೀರವಾದ ಚರ್ಚೆ ನಡೆದು ಸೇತುವೆ ಸಂಚಾರವನ್ನು ನಿರ್ಭಂದಿಸಿ ತಹಶೀಲ್ದಾರ್ ರವರು ಹೊರಡಿಸಿದ ಆದೇಶದ ವಿರುದ್ಧ ಜಿಲ್ಲಾಧಿಕಾರಿಕಾರಿಗಳಿಗೆ ವರದಿ ಸಲ್ಲಿಸಲಾಗಿತ್ತು. ಈದಿನ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಕೂಡಾ ಉಪಸ್ಥಿತರಿದ್ದು ಈ ವಿಷಯದ ಬಗ್ಗೆ ಚರ್ಚೆ ನಡೆದು ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಸೇತುವೆಯ ಸಾಮರ್ಥ್ಯ ಪರೀಕ್ಷೆ ವರದಿ ಬರುವ ತನಕ ಲಘು ವಾಹನಗಳನ್ನು ಎಂದಿನಂತೆ ಸಂಚರಿಸಲು ಉಸ್ತುವಾರಿ ಸಚಿವರು ಆದೇಶಿಸಿದರು. ಸಭೆಗೆ ಮುಂಚಿತವಾಗಿ ಉಸ್ತುವಾರಿ ಸಚಿವರನ್ನು ಬಂಟ್ವಾಳ ಪುರಸಭಾ ಸದಸ್ಯರಾದ ಅಬೂಬಕ್ಕರ್ ಸಿದ್ಧಿಕ್ ಗುಡ್ಡೆಯಂಗಡಿಯವರ ನೇತೃತ್ವದ ನಿಯೋಗವು ಭೇಟಿಯಾಗಿ ವಾಸ್ತವ ವಿಚಾರಗಳನ್ನು ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿದ್ದರು. ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಝಕ್ ಕುಕ್ಕಾಜೆ, ಅಬ್ದುಲ್ ಖಾದರ್ ಬಂಗ್ಲಗುಡ್ಡೆ, ಖಾಲಿದ್ ಬೋಗೋಡಿ, ಅಬ್ದುಲ್ ಮುತ್ತಲಿಬ್ ಹಾಗೂ ಇನ್ನಿತರರು ನಿಯೋಗದಲ್ಲಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!