ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ಸುಗಳ ಸಮಸ್ಯೆಗೆ ಪರಿಹಾರ ಕೊಡಿಸಲು ಮನವಿ.

ಕಳೆದ ಒಂದೆರಡು ತಿಂಗಳುಗಳಿಂದ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಕೊಳ್ತಿಗೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಕ್ಕಮ್ಮನವರ ನೇತೃತ್ವದ ನಿಯೋಗವೊಂದು ಪುತ್ತೂರು ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್‌ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಕೊಳ್ತಿಗೆ ಗ್ರಾಮದ ಜನಸಾಮಾನ್ಯರಿಗೆ ಕಳೆದ ಅನೇಕ ವರ್ಷಗಳಿಂದ ಸಂಚಾರ ವ್ಯವಸ್ಥೆಯ ಜೀವನಾಡಿಯಾಗಿದ್ದ ಕೆಲವು ಬಸ್ಸುಗಳು ಕಳೆದ 2 ತಿಂಗಳುಗಳಿಂದ ತಮ್ಮ ಓಡಾಟವನ್ನು ನಿಲ್ಲಿಸಿದ್ದುವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನೇಕ ತೊಂದರೆಗಳು ಉಂಟಾಗುತ್ತಿರುವುದನ್ನು ಮನಗಂಡ ಕೊಳ್ತಿಗೆ ಗ್ರಾಮ ಪಂಚಾಯತ್ ಆಡಳಿತ ಅಧ್ಯಕ್ಷೆ ಶ್ರೀಮತಿ ಅಕ್ಕಮ್ಮನವರ ನೇತೃತ್ವದಲ್ಲಿ ನಿಯೋಗ ತೆರಳಿ ಡಿಪೋ ಮ್ಯಾನೇಜರ್ ಜೊತೆಗೆ ಚರ್ಚಿಸಿತು. ಪ್ರಸ್ತುತ ಡಿಪೋದಲ್ಲಿ ಬಸ್ಸು ಚಾಲಕರ ಹಾಗೂ ನಿರ್ವಾಹಕರ ಕೊರತೆಯಿರುವುದು ಈ ಸಮಸ್ಯೆಗೆ ಕಾರಣವಾಗಿದೆ. ಇದೀಗ ಚಾಲಕ – ನಿರ್ವಾಹಕರ ನೇಮಕಾತಿ ನಡೆಯುತ್ತಿದ್ದು ಮುಂದಿನ ತಿಂಗಳ ಜುಲೈ 1ರಿಂದ 80 ಮಂದಿ ಸಿಬ್ಬಂಧಿಗಳು ಡಿಪೋಗೆ ಸೇರಿಕೊಳ್ಳಲಿದ್ದಾರೆ. ಜುಲೈ ಒಂದನೇ ತಾರೀಖಿನಿಂದ ಮತ್ತೆ ಬಸ್ಸು ಸೇವೆಯನ್ನು ಹಿಂದಿನ0ತೆಯೇ ನೀಡಲಿದ್ದೇವೆ ಎಂದು ಡಿಪೋಮ್ಯಾನೇಜರ್ ನಿಯೋಗಕ್ಕೆ ಭರವಸೆ ನೀಡಿದರು. ನಿಯೋಗದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಮೋದ್ ಕೆ.ಎಸ್ , ಸದಸ್ಯರುಗಳಾದ ಪವನ್ ಡಿ.ಜಿ , ಶ್ರೀಮತಿ ವೇದಾವತಿ, ಶ್ರೀಮತಿ ಯಶೋದಾ ಹಾಗೂ ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಪುತ್ತೂರು ಕಾಂಗ್ರೆಸ್ ಮುಖಂಡರಾದ ರಾಮಚಂದ್ರ ಸೊರಕೆ ಮತ್ತು ರವೀಂದ್ರ ರೈ ನೆಕ್ಕಿಲು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!