ಕಳೆದ ಒಂದೆರಡು ತಿಂಗಳುಗಳಿಂದ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದಲ್ಲಿ ಕೆಎಸ್ಆರ್ಟಿಸಿ ಬಸ್ಸುಗಳ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಕೊಳ್ತಿಗೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಕ್ಕಮ್ಮನವರ ನೇತೃತ್ವದ ನಿಯೋಗವೊಂದು ಪುತ್ತೂರು ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಕೊಳ್ತಿಗೆ ಗ್ರಾಮದ ಜನಸಾಮಾನ್ಯರಿಗೆ ಕಳೆದ ಅನೇಕ ವರ್ಷಗಳಿಂದ ಸಂಚಾರ ವ್ಯವಸ್ಥೆಯ ಜೀವನಾಡಿಯಾಗಿದ್ದ ಕೆಲವು ಬಸ್ಸುಗಳು ಕಳೆದ 2 ತಿಂಗಳುಗಳಿಂದ ತಮ್ಮ ಓಡಾಟವನ್ನು ನಿಲ್ಲಿಸಿದ್ದುವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನೇಕ ತೊಂದರೆಗಳು ಉಂಟಾಗುತ್ತಿರುವುದನ್ನು ಮನಗಂಡ ಕೊಳ್ತಿಗೆ ಗ್ರಾಮ ಪಂಚಾಯತ್ ಆಡಳಿತ ಅಧ್ಯಕ್ಷೆ ಶ್ರೀಮತಿ ಅಕ್ಕಮ್ಮನವರ ನೇತೃತ್ವದಲ್ಲಿ ನಿಯೋಗ ತೆರಳಿ ಡಿಪೋ ಮ್ಯಾನೇಜರ್ ಜೊತೆಗೆ ಚರ್ಚಿಸಿತು. ಪ್ರಸ್ತುತ ಡಿಪೋದಲ್ಲಿ ಬಸ್ಸು ಚಾಲಕರ ಹಾಗೂ ನಿರ್ವಾಹಕರ ಕೊರತೆಯಿರುವುದು ಈ ಸಮಸ್ಯೆಗೆ ಕಾರಣವಾಗಿದೆ. ಇದೀಗ ಚಾಲಕ – ನಿರ್ವಾಹಕರ ನೇಮಕಾತಿ ನಡೆಯುತ್ತಿದ್ದು ಮುಂದಿನ ತಿಂಗಳ ಜುಲೈ 1ರಿಂದ 80 ಮಂದಿ ಸಿಬ್ಬಂಧಿಗಳು ಡಿಪೋಗೆ ಸೇರಿಕೊಳ್ಳಲಿದ್ದಾರೆ. ಜುಲೈ ಒಂದನೇ ತಾರೀಖಿನಿಂದ ಮತ್ತೆ ಬಸ್ಸು ಸೇವೆಯನ್ನು ಹಿಂದಿನ0ತೆಯೇ ನೀಡಲಿದ್ದೇವೆ ಎಂದು ಡಿಪೋಮ್ಯಾನೇಜರ್ ನಿಯೋಗಕ್ಕೆ ಭರವಸೆ ನೀಡಿದರು. ನಿಯೋಗದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಮೋದ್ ಕೆ.ಎಸ್ , ಸದಸ್ಯರುಗಳಾದ ಪವನ್ ಡಿ.ಜಿ , ಶ್ರೀಮತಿ ವೇದಾವತಿ, ಶ್ರೀಮತಿ ಯಶೋದಾ ಹಾಗೂ ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಪುತ್ತೂರು ಕಾಂಗ್ರೆಸ್ ಮುಖಂಡರಾದ ರಾಮಚಂದ್ರ ಸೊರಕೆ ಮತ್ತು ರವೀಂದ್ರ ರೈ ನೆಕ್ಕಿಲು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…