ಇತರೆ

ಕಡಬ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಕಡಬ ಭೇಟಿ

ಪೊಲೀಸರು ಹಿಂದೂ ಕಾರ್ಯಕರ್ತರ ಮನೆಗೆ ರಾತ್ರಿ ತೆರಳಿ ಜಿಪಿಎಸ್ ಫೋಟೋ ತೆಗೆದ ಬಳಿಕದ ಬೆಳವಣಿಗೆಯಲ್ಲಿ ನಡೆದ ಘಟನೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಬುಧವಾರ ರಾತ್ರಿ ಕಡಬಕ್ಕೆ ಆಗಮಿಸಿ ಹಿಂದೂ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಿದ್ದಾರೆ.

ಮಂಗಳೂರಿಗೆ ಆಗಮಸಿರುವ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು, ಪುತ್ತೂರಿಗೆ ಆಗಮಿಸಿ ಬಳಿಕ ರಾತ್ರಿ ಕಡಬಕ್ಕೆ ಬಂದಿದ್ದಾರೆ. ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಯ ಬಳಿಕ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಗೆ ಸರಕಾರ ನೇಮಿಸಿದ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಅವರ ಸೂಚನೆ ಮೇರೆಗೆ ಪೊಲೀಸರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಪ್ರಮುಖರ ಮಾಹಿತಿಯನ್ನು ಸಂಗ್ರಹಿಸಲು ಪ್ರಾರಂಭಿಸಿದ್ದರು. ರಾತ್ರಿ ವೇಳೆ ಕಡಬದಲ್ಲಿ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡವರ ಮನೆಗೆ ತೆರಳಿ ಜಿ.ಪಿಎಸ್ ಫೋಟೋ ತೆಗದುಕೊಂಡು ಹೋಗಿದ್ದರು. ಇದನ್ನು ವಿರೋಧಿಸಿದ್ದ ಇಲ್ಲಿನ ಹಿಂದೂ ಮುಖಂಡರು ಪೋಲೀಸರ ನಡೆಯಿಂದ ಹಿಂದೂ ಕಾರ್ಯಕರ್ತರ ಮನೆಯಲ್ಲಿ ಆತಂಕ ಸೃಷ್ಠಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ನಡೆದ ಬೆಳವಣಿಗೆಲ್ಲಿ ಕಡಬ ಠಾಣೆಗೆ ತೆರಳಿದ್ದ ಹಿಂದೂ ಕಾರ್ಯಕರ್ತರು ಪೋಲೀಸರ ನಡೆಯನ್ನು ಖಂಡಿಸಿ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ಸಲ್ಲಿಸಿದ್ದರು. ಮರುದಿನ ಠಾಣೆಯ ಮುಂದೆ ಜಮಾಯಿಸಿದ್ದು ಹಿಂದೂ ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರ ಮೇಲೆ ಕಡಬ ಪೊಲೀಸರು ಸುಮೊಟೋ ಕೇಸ್ ದಾಖಲಿಸಿದ್ದರು. ಇದರ ಬೆನ್ನಿಗೆ ಜಿಲ್ಲೆಯಲ್ಲಿ ಹಲವರಿಗೆ ಜಿಲ್ಲೆಯಿಂದ ಗಡಿಪಾರು ಆದೇಶದ ನೋಟೀಸು ನೀಡಲಾಗಿತ್ತು. ಈ ಎರಡೂ ವಿಚಾರಗಳನ್ನು ಖಂಡಿಸಿ ಕಡಬ ಠಾಣೆಯ ಮುಂಭಾಗದ ರಸ್ತೆ ಬದಿಯಲ್ಲಿ ಬಿಜೆಪಿ ಹಾಗೂ ಹಿಂದೂ ಪರಿವಾರ ಸಂಘಟನೆಯವರು ಪ್ರತಿಭಟನೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಕೂಡಾ ದ್ವೇಷದ ಭಾಷಣದ ಆರೋಪದಲ್ಲಿ ವಿಶ್ವಹಿಂದೂ ಪರಿಷತ್ ಮುಖಂಡ ನವೀನ್ ನೆರಿಯಾ ವಿರದ್ಧ ಪ್ರಕರಣ ದಾಖಲಾಗಿತ್ತು. ರಾಜ್ಯದಲ್ಲಿ ಹಿಂದೂಗಳ ಮೇಲೆ ಸರಕಾರ ಪ್ರೇರಿತ ಪೊಲೀಸ್ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಸರಕಾರದ ವಿರುದ್ಧ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಹೋರಾಟ ನಡೆಸಿದ್ದವು. ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೂ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಬುಧವಾರ ಕರ್ನಾಟಕಕ್ಕೆ ಆಗಮಿಸಿದ್ದ ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಕಡಬಕ್ಕೆ ಆಗಮಿಸಿ ಹಿಂದೂ ಕಾರ್ಯಕರ್ತರಿಂದ ಎಲ್ಲಾ ಬೆಳವಣಿಗೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಕಡಬದ ವಿಶ್ವಹಿಂದೂ ಪರಿಷತ್ ಮುಖಂಡರೊಬ್ಬರ ಮನೆಯಲ್ಲಿ ಹಿಂದೂ ಕಾರ್ಯಕರ್ತರೊಂದಿಗೆ ಮಾನವ ಹಕ್ಕು ಆಯೋಗದ ಡಿವೈಎಸ್.ಪಿ ಮನಿಂದರ್ ಗಿಲ್ ನೇತೃತ್ವದ ಅಧಿಕಾರಿಗಳ ತಂಡ ಚರ್ಚೆ ನಡೆಸಿದೆ. ಹಿಂದೂ ಕಾರ್ಯಕರ್ತರಲ್ಲಿ ಪೊಲೀಸರು ಯಾವ ಹೊತ್ತಿಗೆ ಮನೆಗೆ ಬಂದಿದ್ದಾರೆ, ಯಾವ ರೀತಿಯ ವರ್ತನೆ ಮಾಡಿದ್ದಾರೆ. ಏನೆಲ್ಲಾ ಮಾಡಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ|ಕೃಷ್ಣ ಪ್ರಸಾದ್, ಕಡಬ ಪ್ರಖಂಡದ ಪ್ರಮುಖರಾದ ರಾಧಾಕೃಷ್ಣ ಕೋಲ್ಪೆ, ಪ್ರಮೋದ್ ರೈ, ಜಂಯತ್ ಕಲ್ಲುಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

6 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

6 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

6 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

6 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

6 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

6 days ago