ಪೊಲೀಸರು ಹಿಂದೂ ಕಾರ್ಯಕರ್ತರ ಮನೆಗೆ ರಾತ್ರಿ ತೆರಳಿ ಜಿಪಿಎಸ್ ಫೋಟೋ ತೆಗೆದ ಬಳಿಕದ ಬೆಳವಣಿಗೆಯಲ್ಲಿ ನಡೆದ ಘಟನೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಬುಧವಾರ ರಾತ್ರಿ ಕಡಬಕ್ಕೆ ಆಗಮಿಸಿ ಹಿಂದೂ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಿದ್ದಾರೆ.
ಮಂಗಳೂರಿಗೆ ಆಗಮಸಿರುವ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು, ಪುತ್ತೂರಿಗೆ ಆಗಮಿಸಿ ಬಳಿಕ ರಾತ್ರಿ ಕಡಬಕ್ಕೆ ಬಂದಿದ್ದಾರೆ. ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಯ ಬಳಿಕ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಗೆ ಸರಕಾರ ನೇಮಿಸಿದ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಅವರ ಸೂಚನೆ ಮೇರೆಗೆ ಪೊಲೀಸರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಪ್ರಮುಖರ ಮಾಹಿತಿಯನ್ನು ಸಂಗ್ರಹಿಸಲು ಪ್ರಾರಂಭಿಸಿದ್ದರು. ರಾತ್ರಿ ವೇಳೆ ಕಡಬದಲ್ಲಿ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡವರ ಮನೆಗೆ ತೆರಳಿ ಜಿ.ಪಿಎಸ್ ಫೋಟೋ ತೆಗದುಕೊಂಡು ಹೋಗಿದ್ದರು. ಇದನ್ನು ವಿರೋಧಿಸಿದ್ದ ಇಲ್ಲಿನ ಹಿಂದೂ ಮುಖಂಡರು ಪೋಲೀಸರ ನಡೆಯಿಂದ ಹಿಂದೂ ಕಾರ್ಯಕರ್ತರ ಮನೆಯಲ್ಲಿ ಆತಂಕ ಸೃಷ್ಠಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ನಡೆದ ಬೆಳವಣಿಗೆಲ್ಲಿ ಕಡಬ ಠಾಣೆಗೆ ತೆರಳಿದ್ದ ಹಿಂದೂ ಕಾರ್ಯಕರ್ತರು ಪೋಲೀಸರ ನಡೆಯನ್ನು ಖಂಡಿಸಿ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ಸಲ್ಲಿಸಿದ್ದರು. ಮರುದಿನ ಠಾಣೆಯ ಮುಂದೆ ಜಮಾಯಿಸಿದ್ದು ಹಿಂದೂ ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರ ಮೇಲೆ ಕಡಬ ಪೊಲೀಸರು ಸುಮೊಟೋ ಕೇಸ್ ದಾಖಲಿಸಿದ್ದರು. ಇದರ ಬೆನ್ನಿಗೆ ಜಿಲ್ಲೆಯಲ್ಲಿ ಹಲವರಿಗೆ ಜಿಲ್ಲೆಯಿಂದ ಗಡಿಪಾರು ಆದೇಶದ ನೋಟೀಸು ನೀಡಲಾಗಿತ್ತು. ಈ ಎರಡೂ ವಿಚಾರಗಳನ್ನು ಖಂಡಿಸಿ ಕಡಬ ಠಾಣೆಯ ಮುಂಭಾಗದ ರಸ್ತೆ ಬದಿಯಲ್ಲಿ ಬಿಜೆಪಿ ಹಾಗೂ ಹಿಂದೂ ಪರಿವಾರ ಸಂಘಟನೆಯವರು ಪ್ರತಿಭಟನೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಕೂಡಾ ದ್ವೇಷದ ಭಾಷಣದ ಆರೋಪದಲ್ಲಿ ವಿಶ್ವಹಿಂದೂ ಪರಿಷತ್ ಮುಖಂಡ ನವೀನ್ ನೆರಿಯಾ ವಿರದ್ಧ ಪ್ರಕರಣ ದಾಖಲಾಗಿತ್ತು. ರಾಜ್ಯದಲ್ಲಿ ಹಿಂದೂಗಳ ಮೇಲೆ ಸರಕಾರ ಪ್ರೇರಿತ ಪೊಲೀಸ್ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಸರಕಾರದ ವಿರುದ್ಧ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಹೋರಾಟ ನಡೆಸಿದ್ದವು. ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೂ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಬುಧವಾರ ಕರ್ನಾಟಕಕ್ಕೆ ಆಗಮಿಸಿದ್ದ ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಕಡಬಕ್ಕೆ ಆಗಮಿಸಿ ಹಿಂದೂ ಕಾರ್ಯಕರ್ತರಿಂದ ಎಲ್ಲಾ ಬೆಳವಣಿಗೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಕಡಬದ ವಿಶ್ವಹಿಂದೂ ಪರಿಷತ್ ಮುಖಂಡರೊಬ್ಬರ ಮನೆಯಲ್ಲಿ ಹಿಂದೂ ಕಾರ್ಯಕರ್ತರೊಂದಿಗೆ ಮಾನವ ಹಕ್ಕು ಆಯೋಗದ ಡಿವೈಎಸ್.ಪಿ ಮನಿಂದರ್ ಗಿಲ್ ನೇತೃತ್ವದ ಅಧಿಕಾರಿಗಳ ತಂಡ ಚರ್ಚೆ ನಡೆಸಿದೆ. ಹಿಂದೂ ಕಾರ್ಯಕರ್ತರಲ್ಲಿ ಪೊಲೀಸರು ಯಾವ ಹೊತ್ತಿಗೆ ಮನೆಗೆ ಬಂದಿದ್ದಾರೆ, ಯಾವ ರೀತಿಯ ವರ್ತನೆ ಮಾಡಿದ್ದಾರೆ. ಏನೆಲ್ಲಾ ಮಾಡಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ|ಕೃಷ್ಣ ಪ್ರಸಾದ್, ಕಡಬ ಪ್ರಖಂಡದ ಪ್ರಮುಖರಾದ ರಾಧಾಕೃಷ್ಣ ಕೋಲ್ಪೆ, ಪ್ರಮೋದ್ ರೈ, ಜಂಯತ್ ಕಲ್ಲುಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…