ಜನ ಮನದ ನಾಡಿ ಮಿಡಿತ

Advertisement

ಉಡುಪಿ: ವಿಪರೀತ ಮೊಬೈಲ್ ಬಳಸುತ್ತಾಳೆಂದು ಪತ್ನಿಯನ್ನು ಕೊಂದ ಪತಿ

ಹೆಂಡತಿ ವಿಪರೀತ ಮೊಬೈಲ್ ಬಳಸುತ್ತಾಳೆಂದು ಸಿಟ್ಟುಗೊಂಡ ಪತಿ, ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ.

ಹೊಸಮಠ ನಿವಾಸಿ 27ರ ಹರೆಯದ ರೇಖಾ ಕೊಲೆಯಾದ ಮಹಿಳೆ. ಈಕೆಯ ಪತಿ ಕೊಳಂಬೆ ಗ್ರಾಮದ ನಿವಾಸಿ 42 ರ ಹರೆಯದ ಗಣೇಶ ಪೂಜಾರಿ ಎಂಬಾತನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಪತ್ನಿ ಯಾವಾಗಲೂ ವಿಪರೀತ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಮದ್ಯಪಾನ ಮಾಡಿಕೊಂಡು ಬಂದು ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನಿಂದ ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಕಡಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ರೇಖಾ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾಳೆ. ಬಳಿಕ ಆರೋಪಿ ಗಣೇಶ್ ಪೂಜಾರಿ ಮನೆಯಿಂದ ಓಡಿ ಹೋಗಿದ್ದನು. ತಕ್ಷಣವೇ ಕಾರ್ಯಾಚರಣೆಗೆ ಇಳಿದ ಶಂಕರನಾರಾಯಣ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಯಾದ ರೇಖಾ ಪೂಜಾರಿ ಹಾಗೂ ಆರೋಪಿ ಗಣೇಶ ಪೂಜಾರಿ ದಂಪತಿಗಳಿಗೆ 6 ವರ್ಷ ಮತ್ತು 3 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!