ಹೆಂಡತಿ ವಿಪರೀತ ಮೊಬೈಲ್ ಬಳಸುತ್ತಾಳೆಂದು ಸಿಟ್ಟುಗೊಂಡ ಪತಿ, ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ.
ಹೊಸಮಠ ನಿವಾಸಿ 27ರ ಹರೆಯದ ರೇಖಾ ಕೊಲೆಯಾದ ಮಹಿಳೆ. ಈಕೆಯ ಪತಿ ಕೊಳಂಬೆ ಗ್ರಾಮದ ನಿವಾಸಿ 42 ರ ಹರೆಯದ ಗಣೇಶ ಪೂಜಾರಿ ಎಂಬಾತನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಪತ್ನಿ ಯಾವಾಗಲೂ ವಿಪರೀತ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಮದ್ಯಪಾನ ಮಾಡಿಕೊಂಡು ಬಂದು ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನಿಂದ ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಕಡಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ರೇಖಾ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾಳೆ. ಬಳಿಕ ಆರೋಪಿ ಗಣೇಶ್ ಪೂಜಾರಿ ಮನೆಯಿಂದ ಓಡಿ ಹೋಗಿದ್ದನು. ತಕ್ಷಣವೇ ಕಾರ್ಯಾಚರಣೆಗೆ ಇಳಿದ ಶಂಕರನಾರಾಯಣ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಯಾದ ರೇಖಾ ಪೂಜಾರಿ ಹಾಗೂ ಆರೋಪಿ ಗಣೇಶ ಪೂಜಾರಿ ದಂಪತಿಗಳಿಗೆ 6 ವರ್ಷ ಮತ್ತು 3 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…