ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಯುವ ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ; ಬಂಟ ದಿನಾಚರಣೆ ಪ್ರಯುಕ್ತ ತುಳುನಾಡ ಬಂಟೆರೆ ಪರ್ಬ 2023

ಯುವ ಬಂಟರ ಸಂಘ ಪುತ್ತೂರು ತಾಲೂಕು ಸಮಿತಿದ ಆಶ್ರಯದಲ್ಲಿ ಬಂಟ ದಿನಾಚರಣೆ ಪ್ರಯುಕ್ತ ಜುಲೈ 23 ರಂದು ತುಳುನಾಡ ಬಂಟೆರೆ ಪರ್ಬ 2023 ಎನ್ನುವ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಇದರಲ್ಲಿ ದಕ್ಷಿಣ ಕನ್ನಡ, ಕಾಸರಗೋಡು ಮತ್ತು ಉಡುಪಿ ಜಿಲ್ಲೆಯ ಆಯ್ದ 8 ತಂಡಗಳು ಭಾಗವಹಿಸಿತು. ಇದರಲ್ಲಿ ತುಳುನಾಡು ಮತ್ತು ಬಂಟ ಸಂಸ್ಕೃತಿಯ ಪ್ರದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ನಮ್ಮೂರಿನ ಹೆಮ್ಮೆಯ ಕರ್ನಾಟಕ ರಾಜ್ಯದ ಹೈಕೋರ್ಟ್ ನ್ಯಾಯಾಧೀಶರು ಸವಣೂರು ವಿಶ್ವಜೀತ್ ಶೆಟ್ಟಿಯವರು ಬಂದು ಸಮಾಜದ ಪರವಾಗಿ ಗೌರವ ಸ್ವೀಕರಿಸಿದರು.

ಕಾರ್ಯಕ್ರಮನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರು ಅಜಿತ್ ರೈ ಮಾಲಾಡಿ ಉದ್ಘಾಟಿಸಿದರು. ಪುತ್ತೂರಿನ ಜನಪ್ರಿಯ ಶಾಸಕರು ಅಶೋಕ್ ಕುಮಾರ್ ರೈ, ಮುಂಬಯಿ ಹೇರಂಭಾ ಗ್ರೂಪ್ ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಇಂಟರ್ ನ್ಯಾಶನಲ್ ಸಿವಿಲ್ ಸರ್ವೆಂಟ್ ನಿತ್ಯಾನಂದ ಶೆಟ್ಟಿ, ಮುಂಬಯಿ ನಿವೃತ್ತ ಡೆಪ್ಯುಟಿ ಕಮೀಷನರ್ ಶಾರ್ಪ್ ಶೂಟರ್ ಖ್ಯಾತಿಯ ಪ್ರಕಾಶ್ ಭಂಡಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ಮಹಾನಗರ ಪಾಲಿಕೆಯ ಜಂಟೀ ಆಯುಕ್ತರು ವಾಣಿ ಎಸ್ ಆಳ್ವ, ಗುಣರಂಜನ್ ಶೆಟ್ಟಿ, ಪ್ರಕಾಶ್ ರೈ ದೇರ್ಲ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮಲ್ಲಿಕಾ ಪ್ರಸಾದ್ ಸಮಾರೋಪ ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷರು ಕಾವು ಹೇಮನಾಥ್ ಶೆಟ್ಟಿಯವರು ಮತ್ತು ಹೀಗೆ ಗಣ್ಯಾತಿ ಗಣ್ಯರು ಕಾರ್ಯಕ್ರಮದಲಿ ಉಪಸ್ಥಿತರಿದ್ದರು.

ಖ್ಯಾತ ನಿರೂಪಕ ನಿತೇಶ್ ಶೆಟ್ಡಿ ಎಕ್ಕಾರ್ ಈ ಕಾರ್ಯಕ್ರಮದ ಮುಖ್ಯ ನಿರೂಪಕರಾಗಿ ಭಾಗವಹಿಸಿದರು.

ಈ ಕಾರ್ಯಕ್ರಮಗಳ ಮಧ್ಯೆ ನೋಡುಗರನ್ನು ರಂಜಿಸಲು ನಮ್ಮೂರಿನ ಬಂಟ ತಾರೆಯರಾದ ವಿಜಯಕುಮಾರ್ ಕೋಡಿಯಾಲ್ ಬೈಲ್, ಸರ್ಕಸ್ ಚಿತ್ರದ ಹೀರೋ ರೂಪೇಶ್ ಶೆಟ್ಟಿ, ಹೀರೋಯಿನ್ ರಚನಾ ಶೆಟ್ಟಿ, ವಿಲನ್ ಯಶ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಸುಂದರ್ ರೈ ಪಾಣಾಜೆ. ಚಲನ ಚಿತ್ರ ಹಾಡುಗಾರ ಸಂಗೀತ ನಿರ್ಧೇಶಕ ಅರ್ಜುನ್ ಜನ್ಯನ ಶಿಷ್ಯ ನಿಶಾನ್ ರೈ ಮಠಂತಬೆಟ್ಟು, ಸಂಗೀತ ನಿರ್ದೇಶಕ ಪ್ರಸಾದ್, ಕಬಡ್ಡಿ ಆಟಗಾರ ಪ್ರಶಾಂತ್ ರೈ ಸೇರಿದಂತೆ ಹಲವಾರು ಮಂದಿ ಸಾಧಕರು ಸೇರಿಕೊಂಡರು.

ಕಳೆದ 10 ವರ್ಷಗಳಿಂದ ಬಂಟ ದಿನಾಚರಣೆ ಕಾರ್ಯಕ್ರಮ ನಡೆಯುತ್ತಾ ಬಂದಿದೆ. ಬೆಳಿಗ್ಗೆ ಗಣಹೋಮ ಸತ್ಯನಾರಾಯಣ ಪೂಜೆ, ನಂತರ ಸಾಂಸ್ಕೃತಿಕ ಕಾರ್ಯಕ್ರಮ, ಸಭೆ. ಮಧ್ಯಾಹ್ನ ಮುಗೀತಿತ್ತು. ಈ ಬಾರಿ ಜುಲೈ 22 ಶನಿವಾರ ಬೆಳಿಗ್ಗೆ ಗಣಹೋಮ ಮತ್ತು ಸತ್ಯನಾರಾಯಣ ಪೂಜೆ ನಡೆಯಿತು. ಜುಲೈ 23 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಸಂಪೂರ್ಣ ಮನರಂಜನಾ ಕಾರ್ಯಕ್ರಮ‌ ನಡೆಯಿತು. ಇದರೊಂದಿಗೆ ಸ್ಥಳೀಯ ಪ್ರತಿಭೆಗಳ ಪ್ರದರ್ಶನವೂ ನಡೆಯಿತು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!