ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಪರೂಪದ ಚಿಪ್ಪು ಹಂದಿಗೆ ಜೀವದಾನ: 50 ಅಡಿ ಬಾವಿಯಿಂದ ರಕ್ಷಣೆ

ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಅಪರೂಪದ ಚಿಪ್ಪು ಹಂದಿಯನ್ನ ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಸಂಜೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿತಿನ್ ಹಿರಿಯಡ್ಕ ಅವರು ತಕ್ಷಣವೇ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಅವರಿಗೆ ವಿಷಯ ತಿಳಿಸಿದ್ರು. ಕುಲಾಲ್ ಅವರು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕರೆದೊಯ್ದರು. ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ, ನೀರೆಯ ಸುನಿಲ್ ಎಂಬವರು ಬಾವಿಗೆ ಇಳಿದು 20 ಅಡಿ ಆಳದಲ್ಲಿದ್ದ ಚಿಪ್ಪು ಹಂದಿಯನ್ನು ಹಿಡಿದು ಮೇಲಕ್ಕೆತ್ತಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ವೀರೆಶ್, ಅರಣ್ಯ ರಕ್ಷಕರು ಪ್ರವೀಣ್, ಶ್ರೀಧರ್ ನರೇಗಲ್ ಸೇರಿದಂತೆ ಹಲವರು ಭಾಗವಹಿಸಿದ್ರು. ಅನಂತರ, ಚಿಪ್ಪು ಹಂದಿಯನ್ನು ಸುಸ್ಥಿತಿಯಲ್ಲಿ ಹಿಡಿದು, ಬಯಲು ಪ್ರದೇಶದ ರಕ್ಷಿತ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು. ಚಿಪ್ಪು ಹಂದಿ ಒಂದು ಸಸ್ತನಿ ಆಗಿದ್ದು, ಮಣ್ಣು ಮತ್ತು ಮರದ ಪೊಟರೆಗಳಲ್ಲಿ ವಾಸವಿದ್ದು, ಇರುವೆ ಮತ್ತು ಗೆದ್ದಲುಗಳನ್ನು ಆಹಾರವನ್ನಾಗಿಸಿಕೊಂಡು ಬದುಕುತ್ತದೆ. ಇದು ಏಶ್ಯಾ ಮತ್ತು ಯುರೋಪ್ ಖಂಡದಲ್ಲಿ ಕಂಡುಬರುವ ಅಪರೂಪದ ಪ್ರಾಣಿಯಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!