ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಅಪರೂಪದ ಚಿಪ್ಪು ಹಂದಿಯನ್ನ ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಸಂಜೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿತಿನ್ ಹಿರಿಯಡ್ಕ ಅವರು ತಕ್ಷಣವೇ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಅವರಿಗೆ ವಿಷಯ ತಿಳಿಸಿದ್ರು. ಕುಲಾಲ್ ಅವರು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕರೆದೊಯ್ದರು. ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ, ನೀರೆಯ ಸುನಿಲ್ ಎಂಬವರು ಬಾವಿಗೆ ಇಳಿದು 20 ಅಡಿ ಆಳದಲ್ಲಿದ್ದ ಚಿಪ್ಪು ಹಂದಿಯನ್ನು ಹಿಡಿದು ಮೇಲಕ್ಕೆತ್ತಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ವೀರೆಶ್, ಅರಣ್ಯ ರಕ್ಷಕರು ಪ್ರವೀಣ್, ಶ್ರೀಧರ್ ನರೇಗಲ್ ಸೇರಿದಂತೆ ಹಲವರು ಭಾಗವಹಿಸಿದ್ರು. ಅನಂತರ, ಚಿಪ್ಪು ಹಂದಿಯನ್ನು ಸುಸ್ಥಿತಿಯಲ್ಲಿ ಹಿಡಿದು, ಬಯಲು ಪ್ರದೇಶದ ರಕ್ಷಿತ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು. ಚಿಪ್ಪು ಹಂದಿ ಒಂದು ಸಸ್ತನಿ ಆಗಿದ್ದು, ಮಣ್ಣು ಮತ್ತು ಮರದ ಪೊಟರೆಗಳಲ್ಲಿ ವಾಸವಿದ್ದು, ಇರುವೆ ಮತ್ತು ಗೆದ್ದಲುಗಳನ್ನು ಆಹಾರವನ್ನಾಗಿಸಿಕೊಂಡು ಬದುಕುತ್ತದೆ. ಇದು ಏಶ್ಯಾ ಮತ್ತು ಯುರೋಪ್ ಖಂಡದಲ್ಲಿ ಕಂಡುಬರುವ ಅಪರೂಪದ ಪ್ರಾಣಿಯಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…