ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಅಪರೂಪದ ಚಿಪ್ಪು ಹಂದಿಯನ್ನ ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಸಂಜೆಯ ವೇಳೆಗೆ ಈ ಘಟನೆ ಬೆಳಕಿಗೆ ಬಂದು, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿತಿನ್ ಹಿರಿಯಡ್ಕ ಅವರು ತಕ್ಷಣವೇ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಅವರಿಗೆ ವಿಷಯ ತಿಳಿಸಿದ್ರು. ಕುಲಾಲ್ ಅವರು ಅರಣ್ಯ ಇಲಾಖೆಯ ತಂಡವನ್ನು ಸ್ಥಳಕ್ಕೆ ಕರೆದೊಯ್ದರು. ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ, ನೀರೆಯ ಸುನಿಲ್ ಎಂಬವರು ಬಾವಿಗೆ ಇಳಿದು 20 ಅಡಿ ಆಳದಲ್ಲಿದ್ದ ಚಿಪ್ಪು ಹಂದಿಯನ್ನು ಹಿಡಿದು ಮೇಲಕ್ಕೆತ್ತಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ವೀರೆಶ್, ಅರಣ್ಯ ರಕ್ಷಕರು ಪ್ರವೀಣ್, ಶ್ರೀಧರ್ ನರೇಗಲ್ ಸೇರಿದಂತೆ ಹಲವರು ಭಾಗವಹಿಸಿದ್ರು. ಅನಂತರ, ಚಿಪ್ಪು ಹಂದಿಯನ್ನು ಸುಸ್ಥಿತಿಯಲ್ಲಿ ಹಿಡಿದು, ಬಯಲು ಪ್ರದೇಶದ ರಕ್ಷಿತ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಯಿತು. ಚಿಪ್ಪು ಹಂದಿ ಒಂದು ಸಸ್ತನಿ ಆಗಿದ್ದು, ಮಣ್ಣು ಮತ್ತು ಮರದ ಪೊಟರೆಗಳಲ್ಲಿ ವಾಸವಿದ್ದು, ಇರುವೆ ಮತ್ತು ಗೆದ್ದಲುಗಳನ್ನು ಆಹಾರವನ್ನಾಗಿಸಿಕೊಂಡು ಬದುಕುತ್ತದೆ. ಇದು ಏಶ್ಯಾ ಮತ್ತು ಯುರೋಪ್ ಖಂಡದಲ್ಲಿ ಕಂಡುಬರುವ ಅಪರೂಪದ ಪ್ರಾಣಿಯಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…