ಉಡುಪಿ ನಗರದ ಮುಖ್ಯ ರಸ್ತೆಗಳ ಸರ್ಕಲ್ಗಳಲ್ಲಿ ಹತ್ತಾರು ವರ್ಷಗಳ ಹಿಂದೆ ಜಿಲ್ಲಾಡಳಿತ ಸಿಗ್ನಲ್ ಕಂಬಗಳನ್ನು ಅಳವಡಿಸಿತ್ತು.
ಆದರೆ ಕೆಲವು ತಿಂಗಳು ಮಾತ್ರ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದ ಕಂಬಗಳು ಬಳಿಕ ತಮ್ಮ ಕರ್ತವ್ಯಗಳನ್ನು ನಿಲ್ಲಿಸಿದ್ದವು. ಸದ್ಯ ಕಬ್ಬಿಣದ ಸಿಗ್ನಲ್ ಕಂಬಗಳು ತುಕ್ಕು ಹಿಡಿದು ಬೀಳುವ ಸ್ಥಿತಿಯಲ್ಲಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಮಳೆ ಗಾಳಿಗೆ ಧರೆಗೆ ಉರುಳುವ ಸಾಧ್ಯತೆ ಇದೆ. ನಗರಸಭೆಯು ತಕ್ಷಣ, ನಗರದಲ್ಲಿರುವ ಅನುಪಯುಕ್ತ ಕಂಬಗಳನ್ನು ತೆರವುಗೊಳಿಸಿ ಸಂಭವನೀಯ ದುರಂತಗಳನ್ನು ತಪ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ. ಹಳೆ ತಾಲೂಕು ಕಛೇರಿ ಬಳಿ ಇರುವ, ಕೆನರಾ ಬ್ಯಾಂಕ್ ಎದುರಲ್ಲಿಯೂ ಸಿಗ್ನಲ್ ಕಂಬವೊ0ದು ತುಂಡಾಗಿದ್ದು, ವಾಹನಗಳ, ಸಾರ್ವಜನಿಕರ ಮೇಲೆ ಬೀಳುವ ಸಾಧ್ಯತೆ ಕಂಡುಬ0ದಿದೆ. ಹಳೆ ಡಯಾನಾ ಸರ್ಕಲ್ ಬಳಿಯ ಪಾದಚಾರಿ ರಸ್ತೆಯ ಮೇಲೆ ಕೆಲವು ವರ್ಷಗಳಿಂದ ಸಿಗ್ನಲ್ ಕಂಬಗಳು ಇಡಲಾಗಿದೆ. ಈಗ ಆ ಕಂಬಗಳ ಸುತ್ತಲು ಗಿಡ ಗಂಟಿ ಬೆಳೆದುನಿಂತಿದ್ದು, ವಿಷ ಜಂತುಗಳಿಗೆ ಆಶ್ರಯವಾದಂತಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…