ಉಡುಪಿ ನಗರದ ಮುಖ್ಯ ರಸ್ತೆಗಳ ಸರ್ಕಲ್ಗಳಲ್ಲಿ ಹತ್ತಾರು ವರ್ಷಗಳ ಹಿಂದೆ ಜಿಲ್ಲಾಡಳಿತ ಸಿಗ್ನಲ್ ಕಂಬಗಳನ್ನು ಅಳವಡಿಸಿತ್ತು.
ಆದರೆ ಕೆಲವು ತಿಂಗಳು ಮಾತ್ರ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದ ಕಂಬಗಳು ಬಳಿಕ ತಮ್ಮ ಕರ್ತವ್ಯಗಳನ್ನು ನಿಲ್ಲಿಸಿದ್ದವು. ಸದ್ಯ ಕಬ್ಬಿಣದ ಸಿಗ್ನಲ್ ಕಂಬಗಳು ತುಕ್ಕು ಹಿಡಿದು ಬೀಳುವ ಸ್ಥಿತಿಯಲ್ಲಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಮಳೆ ಗಾಳಿಗೆ ಧರೆಗೆ ಉರುಳುವ ಸಾಧ್ಯತೆ ಇದೆ. ನಗರಸಭೆಯು ತಕ್ಷಣ, ನಗರದಲ್ಲಿರುವ ಅನುಪಯುಕ್ತ ಕಂಬಗಳನ್ನು ತೆರವುಗೊಳಿಸಿ ಸಂಭವನೀಯ ದುರಂತಗಳನ್ನು ತಪ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ. ಹಳೆ ತಾಲೂಕು ಕಛೇರಿ ಬಳಿ ಇರುವ, ಕೆನರಾ ಬ್ಯಾಂಕ್ ಎದುರಲ್ಲಿಯೂ ಸಿಗ್ನಲ್ ಕಂಬವೊ0ದು ತುಂಡಾಗಿದ್ದು, ವಾಹನಗಳ, ಸಾರ್ವಜನಿಕರ ಮೇಲೆ ಬೀಳುವ ಸಾಧ್ಯತೆ ಕಂಡುಬ0ದಿದೆ. ಹಳೆ ಡಯಾನಾ ಸರ್ಕಲ್ ಬಳಿಯ ಪಾದಚಾರಿ ರಸ್ತೆಯ ಮೇಲೆ ಕೆಲವು ವರ್ಷಗಳಿಂದ ಸಿಗ್ನಲ್ ಕಂಬಗಳು ಇಡಲಾಗಿದೆ. ಈಗ ಆ ಕಂಬಗಳ ಸುತ್ತಲು ಗಿಡ ಗಂಟಿ ಬೆಳೆದುನಿಂತಿದ್ದು, ವಿಷ ಜಂತುಗಳಿಗೆ ಆಶ್ರಯವಾದಂತಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…