ಸೆಪ್ಟಂಬರ್ 27ರಂದು ಮರೋಳಿ ಜೋಡುಕಟ್ಟೆಯ ಸಮಾಜ ಸೇವಾ ಪ್ರತಿಷ್ಠಾನದ ಆವರಣದ ವಜ್ರಕಾಯ ರಂಗ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 20ನೇ ವರ್ಷದ ಶ್ರೀ ಗಣೇಶೋತ್ಸವವು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ಮರೋಳಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.
ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ಸ್ವಾತಂತ್ರöಪೂರ್ವದಲ್ಲಿ ಜನರಲ್ಲಿ ಒಗ್ಗಟ್ಟು ಮೂಡಿಸಲು ಬಾಲಗಂಗಾಧರ ತಿಲಕ್ ಅವರ ಚಿಂತನೆಯಲ್ಲಿ ಮೂಡಿಬಂದಂತಹ ಸಾರ್ವಜನಿಕ ಶ್ರೀಗಣೇಶೋತ್ಸವ ಅಂದು ಬಹಳ ಮಹತ್ವವನ್ನು ಪಡೆದುಕೊಂಡಿತ್ತು. ಇದೇ ಹಾದಿಯಲ್ಲಿ ಸಾಗಿರುವ ಮರೋಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧಾರ್ಮಿಕ ಚಿಂತನೆಯನ್ನಿರಿಸಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಸಮಾಜ ಸೇವಾ ಪ್ರತಿಷ್ಠಾನ ಬರಿಯ ಧಾರ್ಮಿಕ ಕಾರ್ಯಕ್ರಮಗಳಲ್ಲದೆ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಂಡದ್ದು ಮಾತ್ರವಲ್ಲದೆ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು. ಮರೋಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅನಿಲ್ ಕೆ ಕೆಂಬಾರ್. ಕೋಶಾಧಿಕಾರಿ ಹರೀಶ್ ಶೆಟ್ಟಿ, ಸೂರ್ಯನಾರಾಯಣ ದೇವಸ್ಥಾನ ಆಡಳಿತ ಮೊಕ್ತೇಸರ ಗುಡ್ಡೆ ಗುತ್ತು ಗಣೇಶ್ ಶೆಟ್ಟಿ, ಸೂರ್ಯನಾರಾಯಣ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಿರಿಧರ್ ಶೆಟ್ಟಿ. ನಿಕಟಪೂರ್ವ ಕಾರ್ಪೊರೇಟರ್ ಕೇಶವ ಮರೋಳಿ, ಜಯರಾಂ ಮರೋಳಿ, ರೋಹಿತಾಕ್ಷ ಮರೋಳಿ, ಜ್ಯೋತಿ ಕುಮಾರ್, ರತನ್ ಶೆಟ್ಟಿ ಕಂಕನಾಡಿ, ನವೀನ್ ಪ್ರಭು, ಆಶಾ ರಾಜೀವ್, ಪ್ರಶಾಂತ್ ಮರೋಳಿ, ಕಿಶೋರ್ ಶೆಟ್ಟಿ ಸೂರ್ಯನಗರ, ಭವಾನಿ ಶಂಕರ್ ಮರೋಳಿ, ಸರಳ ಎಸ್, ರಾಘವೇಂದ್ರ ಶೆಟ್ಟಿ, ತುಷಾರ್ ಎ. ಕೆಂಬಾರ್ ಮತ್ತಿತರರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…