ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಯೋಗ ಮಾಡಿ ಎಂದು ಜಗತ್ತಿಗೆ ಸಾರಿ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಯೋಗವನ್ನು ಜನಪ್ರಿಯಗೊಳಿಸಿದ ದಿನ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಗದ ಮಹತ್ವವನ್ನು ಮನಗಂಡು ಅದನ್ನು ಜನಪ್ರಿಯಗೊಳಿಸಿದ ಪರಿಣಾಮವಾಗಿ ಯೋಗದ ಬಗ್ಗೆ ಜನರಲ್ಲಿ ವ್ಯಾಪಕವಾದ ಜನಜಾಗೃತಿ ಉಂಟಾಗಿದೆ. ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಮುನ್ನಾ ಉಡುಪಿ ಜಿಲ್ಲೆಯ ಕೋಡಿ ಹಳೆ ಅಳಿವೆ ಬಳಿಯ ಕಡಲ ಕಿನಾರೆಯಲ್ಲಿ ಪದ್ಮಾಸನದ ಮರಳು ಶಿಲ್ಪವನ್ನು ರೂಪಿಸಿ ಜನರ ಗಮನ ಸೆಳೆಯಲಾಗುತ್ತಿದೆ. ಈ ಮರಳು ಉಬ್ಬು ಶಿಲ್ಪವು ಯೋಗದ ಮಹತ್ವವನ್ನು ಸಾರುವ ಜೊತೆಗೆ ಅದರ ಆಸನಗಳ ಪರಿಚಯವನ್ನು ಮಾಡಿಸುವಂತಿದೆ. ಪದ್ಮಾಸನದಲ್ಲಿರುವ ಈ ಶಿಲ್ಪವನ್ನು ಸ್ಯಾಂಡ್ ಥೀಮ್ ಉಡುಪಿ ತಂಡ ರಚಿಸಿದೆ. ಯೋಗಪಟುವನ್ನು ಕೇಂದ್ರವಾಗಿಟ್ಟುಕೊಂಡು ರಚನೆಯಾಗಿರುವ ಕಲಾಕೃತಿಯ ಉತ್ತಮ ಆರೋಗ್ಯಕ್ಕಾಗಿ ಯೋಗ ಎಂಬ ಧ್ಯೇಯ ವಾಕ್ಯವನ್ನು ಸಾರುತ್ತಿದೆ. ಮೂರು ಅಡಿ ಎತ್ತರ ಮತ್ತು ಏಳು ಅಡಿ ಅಗಲದ ಮರಳು ಕಲಾಕೃತಿಯನ್ನು ಕಲಾವಿದರಾದ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಉಜ್ವಲ್ ನಿಟ್ಟೆ ರಚಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…