ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಯೋಗ ಮಾಡಿ ಎಂದು ಜಗತ್ತಿಗೆ ಸಾರಿ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಯೋಗವನ್ನು ಜನಪ್ರಿಯಗೊಳಿಸಿದ ದಿನ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಗದ ಮಹತ್ವವನ್ನು ಮನಗಂಡು ಅದನ್ನು ಜನಪ್ರಿಯಗೊಳಿಸಿದ ಪರಿಣಾಮವಾಗಿ ಯೋಗದ ಬಗ್ಗೆ ಜನರಲ್ಲಿ ವ್ಯಾಪಕವಾದ ಜನಜಾಗೃತಿ ಉಂಟಾಗಿದೆ. ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಮುನ್ನಾ ಉಡುಪಿ ಜಿಲ್ಲೆಯ ಕೋಡಿ ಹಳೆ ಅಳಿವೆ ಬಳಿಯ ಕಡಲ ಕಿನಾರೆಯಲ್ಲಿ ಪದ್ಮಾಸನದ ಮರಳು ಶಿಲ್ಪವನ್ನು ರೂಪಿಸಿ ಜನರ ಗಮನ ಸೆಳೆಯಲಾಗುತ್ತಿದೆ. ಈ ಮರಳು ಉಬ್ಬು ಶಿಲ್ಪವು ಯೋಗದ ಮಹತ್ವವನ್ನು ಸಾರುವ ಜೊತೆಗೆ ಅದರ ಆಸನಗಳ ಪರಿಚಯವನ್ನು ಮಾಡಿಸುವಂತಿದೆ. ಪದ್ಮಾಸನದಲ್ಲಿರುವ ಈ ಶಿಲ್ಪವನ್ನು ಸ್ಯಾಂಡ್ ಥೀಮ್ ಉಡುಪಿ ತಂಡ ರಚಿಸಿದೆ. ಯೋಗಪಟುವನ್ನು ಕೇಂದ್ರವಾಗಿಟ್ಟುಕೊಂಡು ರಚನೆಯಾಗಿರುವ ಕಲಾಕೃತಿಯ ಉತ್ತಮ ಆರೋಗ್ಯಕ್ಕಾಗಿ ಯೋಗ ಎಂಬ ಧ್ಯೇಯ ವಾಕ್ಯವನ್ನು ಸಾರುತ್ತಿದೆ. ಮೂರು ಅಡಿ ಎತ್ತರ ಮತ್ತು ಏಳು ಅಡಿ ಅಗಲದ ಮರಳು ಕಲಾಕೃತಿಯನ್ನು ಕಲಾವಿದರಾದ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಉಜ್ವಲ್ ನಿಟ್ಟೆ ರಚಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…