ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ (ಜೂ.20)ದಂದು ಸ್ಪಷ್ಟಪಡಿಸಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬAಧ ದಾಖಲಾಗಿರುವ ಎಫ್ಐಆರ್, ಆನಂತರ ಸಲ್ಲಿಕೆಯಾಗಿರುವ ಆರೋಪ ಪಟ್ಟಿ ಹಾಗೂ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್ ಶಾಸಕ ಹಾಗೂ ಪ್ರಜ್ವಲ್ ತಂದೆ ಎಚ್. ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ. ರೇವಣ್ಣ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ರೇವಣ್ಣ ಅವರಿಗೆ ಸೀಮಿತವಾಗಿ ಈ ನ್ಯಾಯಾಲಯ ಮಧ್ಯಂತರ ಆದೇಶ ಮಾಡಿದೆ. ಪ್ರಜ್ವಲ್ ವಿರುದ್ಧ ವಿಚಾರಣೆ ಮುಂದುವರಿಸಲು ಯಾವುದೇ ಅಡ್ಡಿಯಿಲ್ಲ ಎಂದರು. ಇದಕ್ಕೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ಧ್ವನಿಗೂಡಿಸಿದರು.
ಇದನ್ನು ಆಲಿಸಿದ ಪೀಠವು ರೇವಣ್ಣ ವಿರುದ್ಧದ ನ್ಯಾಯಾಂಗ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಲಾಗಿದೆ. ಹೀಗಾಗಿ, ಪ್ರಜ್ವಲ್ ವಿರುದ್ಧ ವಿಚಾರಣಾಧೀನ ನ್ಯಾಯಾಲಯವು ವಿಚಾರಣೆ ಮುಂದುವರಿಸಲು ಈ ಆದೇಶ ಅಡ್ಡಿಯಾಗದು ಎಂದು ಸ್ಪಷ್ಟಪಡಿಸಿ, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿದೆ. ಪ್ರಕರಣದ ಹಿನ್ನೆಲೆಯನ್ನು ಗಮನಿಸೋದಾದ್ರೆ ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಗೆ ಎಚ್.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಎಚ್.ಡಿ ರೇವಣ್ಣ ಮತ್ತು ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಆನಂತರ ಸಂತ್ರಸ್ತೆಯ ಸಿಆರ್ಪಿಸಿ ಸೆಕ್ಷನ್ 164 ಹೇಳಿಕೆ ಆಧರಿಸಿ ಪ್ರಜ್ವಲ್ ವಿರುದ್ಧ ಮಾತ್ರ ಅತ್ಯಾಚಾರ ಆರೋಪ ಸೇರಿಸಿ, ಸಕ್ಷಮ ನ್ಯಾಯಾಲಯಕ್ಕೆ ವಿಶೇಷ ತನಿಖಾ ತಂಡವು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದೆ. ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾತ್ರ ಇದೆ. ಈ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ದೊರೆತಿದ್ದು, ಅವರ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. ಇದೇ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಜಾಮೀನು ಕೋರಿದ್ದಾರೆ. ಇನ್ನು ಪ್ರಜ್ವಲ್ ಅರ್ಜಿ ಸಂಬAಧ ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯ ವಿಚಾರಣೆಯನ್ನು ಜೂನ್ 24ಕ್ಕೆ ಮುಂದೂಡಿಕೆ ಮಾಡಿದೆ
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…