ಮಂಗಳೂರು ಮಹಾನಗರ ಪಾಲಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ರವರು ಪಾಲಿಕೆ ಅಧಿಕಾರಿಗಳ ಮಹತ್ವದ ತುರ್ತು ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ಹಾನಿಯಿಂದಾಗಿ ಅನೇಕ ಕಡೆ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಬಿಜೆಪಿ ಆಡಳಿತದಲ್ಲಿದ್ದಾಗ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಪ್ರತೀ ವಾರ್ಡ್ಗೆ 10 ಮನೆಗಳಂತೆ 60 ವಾರ್ಡಿನ ಮನೆಗಳಿಗೂ ತುರ್ತು ದುರಸ್ತಿಗೆ ಸಹಾಯವಾಗುವಂತೆ 40 ಸಾವಿರದವರೆಗೆ ಪರಿಹಾರ ಧನ ನೀಡುವ ನಿರ್ಣಯ ಕೈಗೊಂಡು ಬಜೆಟ್ನಲ್ಲಿ ಘೋಷಿಸಲಾಗಿತ್ತು. ಆದರೆ ಇದೀಗ ಬಿಜೆಪಿ ಆಡಳಿತದ ಅವಧಿ ಅಂತ್ಯವಾಗಿದ್ದು, ಪಾಲಿಕೆಯು ಜಿಲ್ಲಾಡಳಿತದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿರುವ ಕಾರಣ ಪರಿಹಾರ ಧನ ಯಾರಿಗೂ ಸಿಗದಿರುವುದು ಅಕ್ಷಮ್ಯ. ಈ ಹಿಂದಿನ ಕೌನ್ಸಿಲ್ ನ ನಿರ್ಣಯವನ್ನು ತಡೆ ಹಿಡಿಯಲು ಯಾರಿಗೂ ಅಧಿಕಾರವಿಲ್ಲ. ಬಿಜೆಪಿಯು ಈ ಹಿಂದೆ ಬಜೆಟ್ ನಲ್ಲಿ ಮೀಸಲಿಟ್ಟ ಅನುದಾನವನ್ನು ಈಗಿನ ಆಡಳಿತ ವ್ಯವಸ್ಥೆ ಸಮರ್ಪಕವಾಗಿ ಬಳಸದೇ ಜನಸಾಮಾನ್ಯರಿಗೆ ಅನ್ಯಾಯ ಎಸಗುತ್ತಿದೆ ಎಂದು ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…