ಮಂಗಳೂರು ಮಹಾನಗರ ಪಾಲಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ರವರು ಪಾಲಿಕೆ ಅಧಿಕಾರಿಗಳ ಮಹತ್ವದ ತುರ್ತು ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ಹಾನಿಯಿಂದಾಗಿ ಅನೇಕ ಕಡೆ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಬಿಜೆಪಿ ಆಡಳಿತದಲ್ಲಿದ್ದಾಗ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಪ್ರತೀ ವಾರ್ಡ್ಗೆ 10 ಮನೆಗಳಂತೆ 60 ವಾರ್ಡಿನ ಮನೆಗಳಿಗೂ ತುರ್ತು ದುರಸ್ತಿಗೆ ಸಹಾಯವಾಗುವಂತೆ 40 ಸಾವಿರದವರೆಗೆ ಪರಿಹಾರ ಧನ ನೀಡುವ ನಿರ್ಣಯ ಕೈಗೊಂಡು ಬಜೆಟ್ನಲ್ಲಿ ಘೋಷಿಸಲಾಗಿತ್ತು. ಆದರೆ ಇದೀಗ ಬಿಜೆಪಿ ಆಡಳಿತದ ಅವಧಿ ಅಂತ್ಯವಾಗಿದ್ದು, ಪಾಲಿಕೆಯು ಜಿಲ್ಲಾಡಳಿತದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿರುವ ಕಾರಣ ಪರಿಹಾರ ಧನ ಯಾರಿಗೂ ಸಿಗದಿರುವುದು ಅಕ್ಷಮ್ಯ. ಈ ಹಿಂದಿನ ಕೌನ್ಸಿಲ್ ನ ನಿರ್ಣಯವನ್ನು ತಡೆ ಹಿಡಿಯಲು ಯಾರಿಗೂ ಅಧಿಕಾರವಿಲ್ಲ. ಬಿಜೆಪಿಯು ಈ ಹಿಂದೆ ಬಜೆಟ್ ನಲ್ಲಿ ಮೀಸಲಿಟ್ಟ ಅನುದಾನವನ್ನು ಈಗಿನ ಆಡಳಿತ ವ್ಯವಸ್ಥೆ ಸಮರ್ಪಕವಾಗಿ ಬಳಸದೇ ಜನಸಾಮಾನ್ಯರಿಗೆ ಅನ್ಯಾಯ ಎಸಗುತ್ತಿದೆ ಎಂದು ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…