ಜನ ಮನದ ನಾಡಿ ಮಿಡಿತ

Advertisement

ಉಡುಪಿ: “ಲಕ್ಷ್ಮೀ ಅಕ್ಕ, ಗೃಹಲಕ್ಷ್ಮೀ ದುಡ್ ಎಲ್ಲಿ ಅಕ್ಕ ಅಂತಾರೆ”; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಲು ಒಂದು ತಿಂಗಳು ತಡವಾದರೂ ಟೀಕಿಸುವ ಬಿಜೆಪಿ ನಾಯಕರು, ದುಡಿಯುವ ಕೈಗಳಿಗೆ ಸಿಗುವ ನರೇಗಾ ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಮಾತಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ರು.

ದುಡಿಯುವ ಕೈಗಳಿಗೆ ಹಣ ಸಿಗಲಿ ಎಂಬ ಉದ್ದೇಶದಿಂದ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ನರೇಗಾ ಯೋಜನೆ ಆರಂಭಿಸಿದ್ರು. ಆದರೆ, ಕಳೆದ ಐದು ತಿಂಗಳಿಂದ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರಿಗೆ ಸಂಬಳ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ನಿರಂತರವಾಗಿ ನಡೆಯುತ್ತಿದ್ದು, ಒಂದು ತಿಂಗಳು ಹಣ ಬರುವುದು ತಡವಾದರೂ ಲಕ್ಷ್ಮೀ ಅಕ್ಕ, ಗೃಹಲಕ್ಷ್ಮೀ ದುಡ್ ಎಲ್ಲಿ ಅಕ್ಕ ಅಂತಾರೆ, ಕೇಂದ್ರದ ನಾಯಕರೊಂದಿಗೆ ಮಾತನಾಡಿ ಬಿಜೆಪಿ ನಾಯಕರು ನರೇಗಾ ಯೋಜನೆಯ ಹಣ ಬಿಡುಗಡೆ ಮಾಡಿಸಲಿ ಎಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!