ಮೈದುನನಿಂದ ಹಲ್ಲೆಗೊಳಗಾಗಿ ತಾಯಿ ಮತ್ತು ಮಕ್ಕಳು ಆಸ್ಪತ್ರೆ ಸೇರಿರುವ ಘಟನೆ ಹುಣಸೂರು ತಾಲ್ಲೂಕಿನ ಪಕ್ಷಿರಾಜಪುರ ಗ್ರಾಮದಲ್ಲಿ ನಡೆದಿದೆ. ಪಕ್ಷಿರಾಜಪುರ ಗ್ರಾಮದ ಮಹಿಳೆ ನಯನ ಮತ್ತು ಮಕ್ಕಳು ಭಾಗ್ಯರಾಜು, ಮಿಲನ ಎಂಬುವರ ಮೇಲೆ ಮೈದುನ ಕುಮಿಂದ್ರ ಮತ್ತು ಕುಟುಂಬದವರು ಹಲ್ಲೆ ಮಾಡಿದ್ದಾರೆ ಎಂದು ಹಲ್ಲೆಗೆ ಒಳಗಾದ ಮಹಿಳೆ ತಿಳಿಸಿದ್ದಾರೆ.
ಈ ಹಿಂದೆಯೂ ಹಲ್ಲೆ ಮಾಡಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ, ಪದೆ ಪದೆ ಹಲ್ಲೆ ಮಾಡುತ್ತಲೇ ಇದ್ದಾನೆ. ನಮಗೆ ಯಾವುದೇ ರೀತಿಯ ಸೂಕ್ತ ನ್ಯಾಯ ದೊರೆಯುತ್ತಿಲ್ಲವೆಂದು ಕಣ್ಣೀರು ಹಾಕಿದ್ದಾರೆ. ಪತಿ ಪ್ರೇಮ್ ನಾಥ್ ಮೂರು ವರ್ಷಗಳ ಹಿಂದೆ ಬೇರೊಂದು ಮಹಿಳೆಯನ್ನು ಮದುವೆಯಾಗಿ ಮನೆ ಬಿಟ್ಟು ಹೋಗಿದ್ದಾನೆ. ನಂತರ ಆಗಾಗ ಮನೆಗೆ ಬಂದು ಹಿರಿಯ ಪತ್ನಿ ನಯನಗೆ ಮನೆ ಬಿಟ್ಟು ಹೋಗು ಎಂದು ಕಿರುಕುಳ ನೀಡುತ್ತಿದ್ದನಂತೆ. ಇದಕ್ಕೆ ಒಪ್ಪದ ನಯನ ಮತ್ತು ಮಕ್ಕಳ ಮೇಲೆ ಹಲ್ಲೆ ಮಾಡಿ, ತಲೆ ಮರಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ಚಿಕ್ಕಪ್ಪ ಕುಮಿಂದ್ರನಿಂದ ತುಂಬಾನೆ ತೊಂದರೆಯಾಗಿದ್ದು, ಎರಡು ದಿನಗಳ ಹಿಂದೆ ಈ ಕಿರುಕುಳಕ್ಕೆ ಬೆಸತ್ತು ಆತ್ಮ ಹತ್ಯೆಗೂ ಪ್ರಯತ್ನಿಸಿದ್ದೇವು ಎಂದು ನೊಂದ ಮಹಿಳೆಯ ಮಕ್ಕಳು ಕಣ್ಣೀರು ಹಾಕಿದ್ದಾರೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…