ಜನ ಮನದ ನಾಡಿ ಮಿಡಿತ

Advertisement

ಹಾಸನ: ಸಕಲೇಶಪುರ ತಾಲೂಕಿನ ಎಡಕುಮೇರು ಬಳಿ ರೈಲ್ವೆ ಹಳಿಗೆ ಬಿದ್ದ ಬಂಡೆಗಳು

ಕಳೆದ ಕೆಲವು ದಿನಗಳಿಂದ ಸುರಿಯುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಜರಿತಗಳು ಸಂಭವಿಸಿದ್ದು, ಅಪಾಯಕಾರಿಯಾಗಿ ಪರಿಣಮಿಸಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರು ಬಳಿ ರೈಲ್ವೆ ಹಳಿಗೆ ಜೂನ್ 21ರಂದು ಬೆಳಗಿನ ಜಾವ ರಾತ್ರಿ ಬೃಹತ್ ಗಾತ್ರದ ಬಂಡೆ ಬಿದ್ದಿದ್ದು, ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುವ ರೈಲು ಸಂಚಾರ ಸ್ಥಗಿತಗೊಂಡಿದೆ. ಎಡಕುಮೇರು ಮತ್ತು ಶಿರಿಬಾಗಿಲು ಸ್ಟೇಷನ್ ನಡುವೆ ಹಳಿಗಳ ಮೇಲೆ ಬಂಡೆ ಬಿದ್ದಿದ್ದು, ಹಳಿಗಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು ಕಣ್ಣೂರು, ಬೆಂಗಳೂರು ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶನಿವಾರ ಬೆಳಿಗ್ಗೆ 7.30ಕ್ಕೆ ಬಿ.ಸಿ.ರೋಡು ತಲುಪುವ ಮುರುಡೇಶ್ವರ ರೈಲು ಸುಮಾರು 5 ಗಂಟೆಗಳ ಕಾಲ ತಡವಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು ಎಂದು ಸ್ಥಳೀಯ ಪ್ರಯಾಣಿಕರು ತಿಳಿಸಿದ್ದಾರೆ. ಸಕಲೇಶಪುರದಲ್ಲಿ ಸ್ಥಗಿತಗೊಂಡ ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಬೆಳಿಗ್ಗಿನ ಉಪಹಾರ ವ್ಯವಸ್ಥೆ ಮಾಡಲಾಗಿದೆಯೆಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಶಿರಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಜರಿದು ರಸ್ತೆಗೆ ಹಾನಿ ಸಂಭವಿಸದ್ದರಿಂದ ಪ್ರಯಾಣಿಕರು ಹೆಚ್ಚಾಗಿ ರೈಲು ಪ್ರಯಾಣವನ್ನು ಆಶ್ರಯಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!