ಕಳೆದ ಕೆಲವು ದಿನಗಳಿಂದ ಸುರಿಯುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಜರಿತಗಳು ಸಂಭವಿಸಿದ್ದು, ಅಪಾಯಕಾರಿಯಾಗಿ ಪರಿಣಮಿಸಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರು ಬಳಿ ರೈಲ್ವೆ ಹಳಿಗೆ ಜೂನ್ 21ರಂದು ಬೆಳಗಿನ ಜಾವ ರಾತ್ರಿ ಬೃಹತ್ ಗಾತ್ರದ ಬಂಡೆ ಬಿದ್ದಿದ್ದು, ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುವ ರೈಲು ಸಂಚಾರ ಸ್ಥಗಿತಗೊಂಡಿದೆ. ಎಡಕುಮೇರು ಮತ್ತು ಶಿರಿಬಾಗಿಲು ಸ್ಟೇಷನ್ ನಡುವೆ ಹಳಿಗಳ ಮೇಲೆ ಬಂಡೆ ಬಿದ್ದಿದ್ದು, ಹಳಿಗಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು ಕಣ್ಣೂರು, ಬೆಂಗಳೂರು ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶನಿವಾರ ಬೆಳಿಗ್ಗೆ 7.30ಕ್ಕೆ ಬಿ.ಸಿ.ರೋಡು ತಲುಪುವ ಮುರುಡೇಶ್ವರ ರೈಲು ಸುಮಾರು 5 ಗಂಟೆಗಳ ಕಾಲ ತಡವಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು ಎಂದು ಸ್ಥಳೀಯ ಪ್ರಯಾಣಿಕರು ತಿಳಿಸಿದ್ದಾರೆ. ಸಕಲೇಶಪುರದಲ್ಲಿ ಸ್ಥಗಿತಗೊಂಡ ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಬೆಳಿಗ್ಗಿನ ಉಪಹಾರ ವ್ಯವಸ್ಥೆ ಮಾಡಲಾಗಿದೆಯೆಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಶಿರಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಜರಿದು ರಸ್ತೆಗೆ ಹಾನಿ ಸಂಭವಿಸದ್ದರಿಂದ ಪ್ರಯಾಣಿಕರು ಹೆಚ್ಚಾಗಿ ರೈಲು ಪ್ರಯಾಣವನ್ನು ಆಶ್ರಯಿಸುತ್ತಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…