ಕಳೆದ ಕೆಲವು ದಿನಗಳಿಂದ ಸುರಿಯುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಜರಿತಗಳು ಸಂಭವಿಸಿದ್ದು, ಅಪಾಯಕಾರಿಯಾಗಿ ಪರಿಣಮಿಸಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರು ಬಳಿ ರೈಲ್ವೆ ಹಳಿಗೆ ಜೂನ್ 21ರಂದು ಬೆಳಗಿನ ಜಾವ ರಾತ್ರಿ ಬೃಹತ್ ಗಾತ್ರದ ಬಂಡೆ ಬಿದ್ದಿದ್ದು, ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುವ ರೈಲು ಸಂಚಾರ ಸ್ಥಗಿತಗೊಂಡಿದೆ. ಎಡಕುಮೇರು ಮತ್ತು ಶಿರಿಬಾಗಿಲು ಸ್ಟೇಷನ್ ನಡುವೆ ಹಳಿಗಳ ಮೇಲೆ ಬಂಡೆ ಬಿದ್ದಿದ್ದು, ಹಳಿಗಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು ಕಣ್ಣೂರು, ಬೆಂಗಳೂರು ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶನಿವಾರ ಬೆಳಿಗ್ಗೆ 7.30ಕ್ಕೆ ಬಿ.ಸಿ.ರೋಡು ತಲುಪುವ ಮುರುಡೇಶ್ವರ ರೈಲು ಸುಮಾರು 5 ಗಂಟೆಗಳ ಕಾಲ ತಡವಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು ಎಂದು ಸ್ಥಳೀಯ ಪ್ರಯಾಣಿಕರು ತಿಳಿಸಿದ್ದಾರೆ. ಸಕಲೇಶಪುರದಲ್ಲಿ ಸ್ಥಗಿತಗೊಂಡ ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಬೆಳಿಗ್ಗಿನ ಉಪಹಾರ ವ್ಯವಸ್ಥೆ ಮಾಡಲಾಗಿದೆಯೆಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಶಿರಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಜರಿದು ರಸ್ತೆಗೆ ಹಾನಿ ಸಂಭವಿಸದ್ದರಿಂದ ಪ್ರಯಾಣಿಕರು ಹೆಚ್ಚಾಗಿ ರೈಲು ಪ್ರಯಾಣವನ್ನು ಆಶ್ರಯಿಸುತ್ತಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…