ಸರಕಾರಿ ಜಾಗವಾಗಿದ್ದರೂ ಪರಿಶಿಷ್ಟ ಪಂಗಡದ ಮಹಿಳೆಯೋರ್ವರಿಗೆ ಮನೆಗೆ ತೆರಳಲು ರಸ್ತೆ ಮಾಡಿಕೊಡದೆ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸಿದೆ.
15 ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ನ್ಯಾಯ ಕೊಡದಿದ್ದರೆ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ರಸ್ತೆ ನಿರ್ಮಾಣ ಮಾಡುತ್ತೇವೆ. ಯಾವುದೇ ಅಹಿತಕರ ಘಟನೆಗಳು ನಡೆದರೆ ಆಡಳಿತ ವ್ಯವಸ್ಥೆಯೇ ಹೊಣೆಯಾಗುತ್ತದೆ ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ ಎಚ್ಚರಿಸಿದ್ದಾರೆ.
ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬಂಟ್ವಾಳ ತಾಲೂಕಿನ ಕಡೇಶಿವಾಲ್ಯ ಗ್ರಾಮದ ನೀರಕಜೆ ಎಂಬಲ್ಲಿ ವಾಸ್ತವ್ಯ ಹೊಂದಿರುವ ಚೆನ್ನಪ್ಪ ಎಂಬವರ ಪತ್ನಿ ಸರ್ವೆ ಬಂಬರ್ 98/2 ಎರಲ್ಲಿ 1.98 ಎಕ್ರೆ ಜಮೀನು ಹೊಂದಿದ್ದಾರೆ. ಇದು 1970-71 ದರ್ಖಾಸ್ತು ಮಂಜೂರಾದ ಜಾಗವಾಗಿದ್ದು, ಇದರಲ್ಲಿ 25 ವರ್ಷಗಳ ಹಿಂದೆ ಮನೆ ಕಟ್ಟಿದ್ದಾರೆ. ಇವರ ಮನೆಗೆ ಬರುವಲ್ಲಿ 0.46 ಎಕ್ರೆ ಸರಕಾರಿ ಜಮೀನು ಇದ್ದು, ಸರಕಾರಿ ಜಾಗವಾಗಿದ್ದರೂ ಮನೆಗೆ ಹೋಗಲು ರಸ್ತೆ ನಿರ್ಮಾಣ ಮಾಡಲು ಅವಕಾಶ ನೀಡದೆ ಅನಧಿಕೃತವಾಗಿ ಸ್ವಾಧೀನ ಮಾಡಲಾಗಿದೆ ಎಂಬಿತ್ಯಾದಿ ವಿಚಾರಗಳನ್ನ ಸಾರ್ವಜನಿಕರಿಗೆ ತಿಳಿಸಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ಉಗ್ರಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…