ಸರಕಾರಿ ಜಾಗವಾಗಿದ್ದರೂ ಪರಿಶಿಷ್ಟ ಪಂಗಡದ ಮಹಿಳೆಯೋರ್ವರಿಗೆ ಮನೆಗೆ ತೆರಳಲು ರಸ್ತೆ ಮಾಡಿಕೊಡದೆ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸಿದೆ.
15 ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ನ್ಯಾಯ ಕೊಡದಿದ್ದರೆ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ರಸ್ತೆ ನಿರ್ಮಾಣ ಮಾಡುತ್ತೇವೆ. ಯಾವುದೇ ಅಹಿತಕರ ಘಟನೆಗಳು ನಡೆದರೆ ಆಡಳಿತ ವ್ಯವಸ್ಥೆಯೇ ಹೊಣೆಯಾಗುತ್ತದೆ ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ ಎಚ್ಚರಿಸಿದ್ದಾರೆ.
ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬಂಟ್ವಾಳ ತಾಲೂಕಿನ ಕಡೇಶಿವಾಲ್ಯ ಗ್ರಾಮದ ನೀರಕಜೆ ಎಂಬಲ್ಲಿ ವಾಸ್ತವ್ಯ ಹೊಂದಿರುವ ಚೆನ್ನಪ್ಪ ಎಂಬವರ ಪತ್ನಿ ಸರ್ವೆ ಬಂಬರ್ 98/2 ಎರಲ್ಲಿ 1.98 ಎಕ್ರೆ ಜಮೀನು ಹೊಂದಿದ್ದಾರೆ. ಇದು 1970-71 ದರ್ಖಾಸ್ತು ಮಂಜೂರಾದ ಜಾಗವಾಗಿದ್ದು, ಇದರಲ್ಲಿ 25 ವರ್ಷಗಳ ಹಿಂದೆ ಮನೆ ಕಟ್ಟಿದ್ದಾರೆ. ಇವರ ಮನೆಗೆ ಬರುವಲ್ಲಿ 0.46 ಎಕ್ರೆ ಸರಕಾರಿ ಜಮೀನು ಇದ್ದು, ಸರಕಾರಿ ಜಾಗವಾಗಿದ್ದರೂ ಮನೆಗೆ ಹೋಗಲು ರಸ್ತೆ ನಿರ್ಮಾಣ ಮಾಡಲು ಅವಕಾಶ ನೀಡದೆ ಅನಧಿಕೃತವಾಗಿ ಸ್ವಾಧೀನ ಮಾಡಲಾಗಿದೆ ಎಂಬಿತ್ಯಾದಿ ವಿಚಾರಗಳನ್ನ ಸಾರ್ವಜನಿಕರಿಗೆ ತಿಳಿಸಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ಉಗ್ರಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…