ಮೂಕಪ್ರಾಣಿಗಳ ಜೀವದ ಜೊತೆ ಚೆಲ್ಲಾಟವಾಡುವ ಅದೇಷ್ಟೋ ಕ್ರೂರತ್ವದ ಮನಸ್ಸುಗಳು ನಮ್ಮ ಸಮಾಜದಲ್ಲಿವೆ.
ಅದಕ್ಕೆ ನಿರ್ದಶನವೆಂಬಂತೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ನಿಂದ ಮೂರು ಹಸುಗಳನ್ನು ಕಳ್ಳತನಗೈದ ಘಟನೆ ನಡೆದಿತ್ತು. ಇದೀಗ ಆರೋಪಿಗಳಾದ 38ರ ಹರೆಯದ ಸಲೀನನ್ನ ಪೊಲೀಸರು ಬಂಧಿಸಿದ್ದಾರೆ. ಬಳಿಕ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಗಂಗೊಳ್ಳಿ ಕಡೆಗೆ ತೆರಳುವ ರಸ್ತೆಯಲ್ಲಿ ಸ್ಕೂಟರ್ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಆರೋಪಿಯ ಹೆಡೆಮುರಿಯನ್ನು ಪೊಲೀಸರು ಕಟ್ಟಿದ್ದಾರೆ. ಬಂಧಿತ ಆರೋಪಿ 35 ರ ಹರೆಯದ ಅಬ್ದುಲ್ ರಹೀಮ್ ಎಂದು ತಿಳಿದು ಬಂದಿದ್ದು, ಈತನಿಂದ ಸ್ಕೂಟರ್ ಮತ್ತು 25 ಕೆಜಿ ದನದ ಮಾಂಸ ವಶ ಪಪಡಿಸಿಕೊಳ್ಳಲಾಗಿದ್ದು,ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಇನ್ನೊಂದು ಪ್ರಕರಣದಲ್ಲೂ ಇದೇ ಆರೋಪಿ ಭಾಗಿಯಾಗಿದ್ದು ಈತನ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…