ಹಣಕ್ಕಾಗಿ ಮಗನೋರ್ವ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪದ್ಮಾಬಾಯಿ(45) ಕೊಲೆಯಾದ ಮಹಿಳೆ.
ಮೃತರ ಮಗ ಈಶ ನಾಯಕ್(26) ಕೊಲೆ ಮಾಡಿದ ಆರೋಪಿ. ಜೂ.18ರಂದು ರಾತ್ರಿ ಪದ್ಮಾಬಾಯಿ ಸೊಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಂದು ರಾತ್ರಿ ಪದ್ಮಾಬಾಯಿ ಅವರ ತಂಗಿ ಶಿಲ್ಪಾ ಎಂಬವರಿಗೆ ಕರೆ ಮಾಡಿದ ಈಶ ನಾಯಕ್, ತಾಯಿಗೆ ಸೌಖ್ಯವಿಲ್ಲ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಣ ಕಳುಹಿಸುವಂತೆ ತಿಳಿಸಿದ್ದನು. ಅದರಂತೆ ಶಿಲ್ಪಾ ಆನ್ಲೈನ್ ಮೂಲಕ ಹಣ ಕಳುಹಿಸಿದ್ದರು. ಜೂ.19ರಂದು ಬೆಳಗ್ಗೆ ಶಿಲ್ಪಾರಿಗೆ ಕರೆ ಮಾಡಿದ ಈಶಾ, ತಾಯಿ ಬೆಳಿಗ್ಗೆ ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿಸಿದ್ದನು. ಹಾಗೆ ಶಿಲ್ಪಾ ಆಸ್ಪತ್ರೆಗೆ ಬಂದು ನೋಡಿದಾಗ ಪದ್ಮಬಾಯಿ ಅವರ ಕುತ್ತಿಗೆ ಬಳಿ ಕೆಂಪಾಗಿದ್ದು ಕುತ್ತಿಗೆಯನ್ನು ಒತ್ತಿದ ರೀತಿ ಕಂಡುಬಂದಿದೆ. ಅವರ ಮರಣದಲ್ಲಿ ಸಂಶಯ ಇರುವುದಾಗಿ ಶಿಲ್ಪಾ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜೂ.21ರಂದು ಮಣಿಪಾಲ ಆಸ್ಪತ್ರೆಯ ಫಾರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರು ನೀಡಿದ ವರದಿಯಲ್ಲಿ ಪದ್ಮಾಬಾಯಿ ಅವರನ್ನು ಯಾರೋ ದುಷ್ಕರ್ಮಿಗಳು ಜೂ.18ರಂದು ರಾತ್ರಿಯಿಂದ ಜೂ.19ರ ಬೆಳಗಿನ ನಡುವೆ ಕೊಲೆ ಮಾಡಿರುವುದಾಗಿ ದೃಢಪಟ್ಟಿದೆ. ಅದರಂತೆ ಮಣಿಪಾಲ ಪೊಲೀಸರು ಪ್ರಕರಣವನ್ನು ಕೊಲೆ ಪ್ರಕರಣವೆಂದು ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದರು. ನಂತರದ ತನಿಖೆಯಲ್ಲಿ ಪದ್ಮಾಬಾಯಿ ಅವರನ್ನು ಅವರ ಮಗ ಈಶ ನಾಯ್ಕ್ ಹಣಕ್ಕಾಗಿ ಹಾಗೂ ಕೌಟುಂಬಿಕ ಕಲಹದಿಂದ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಅದರಂತೆ ಪೊಲೀಸರು ಆರೋಪಿ ಈಶ ನಾಯಕ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…