ಪ್ರಸ್ತುತ ಭಾರತದಲ್ಲಿ ಒಂದಲ್ಲ ಒಂದು ಕಾರಣಕ್ಕೆ 30ಕೋಟಿ ಮಂದಿ ಸಹಕಾರಿ ಕ್ಷೇತ್ರದ ಸದಸ್ಯತ್ವವನ್ನು ಹೊಂದಿದ್ದಾರೆ.
ಮುಂದಿನ 5-10ವರ್ಷಗಳಲ್ಲಿ ಈ ಸಂಖ್ಯೆ ದುಪ್ಪಟ್ಟು ಆಗಿ, ನಮ್ಮ ದೇಶದ ಒಟ್ಟು ಜನಸಂಖ್ಯೆಯ ಶೇ.50ರಷ್ಟು ಮಂದಿ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆದುದರಿಂದ ದೇಶದ ಮುಂದಿನ ಭವಿಷ್ಯ ಸಹಕಾರಿ ಕ್ಷೇತ್ರದ ಕೈಯಲ್ಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ರಾಜ್ಯದ ಸೌಹಾರ್ದ ಸಹಕಾರಿಗಳ ಸಾಮಾನ್ಯ ಸೇವಾ ಕೇಂದ್ರಗಳ ಉದ್ಘಾಟನೆಯನ್ನು ಉಡುಪಿಯ ಹೊಟೇಲ್ ಡಯಾನ ಸಭಾಂಗಣದಲ್ಲಿ ನೆರವೇರಿಸಿ ಅವರು ಮಾತನಾಡಿದ್ರು. ಭಾರತದಲ್ಲಿ ಸಹಕಾರಿ ಕ್ಷೇತ್ರ ಸಾಕಷ್ಟು ವಿಸ್ತಾರವಾಗಿ ಬೆಳೆಯುತ್ತಿದ್ದು, ಮುಂದೆ ಇಡೀ ಆಡಳಿತ ವ್ಯವಸ್ಥೆಯೇ ಸಹಕಾರಿ ಕ್ಷೇತ್ರದ ಮೂಲಕ ನಡೆಯುವ ಸಾಧ್ಯತೆ ಇದೆ. ಅದೇ ರೀತಿ ಸಹಕಾರಿ ಸಂಸ್ಥೆಗಳಿಗೆ ಪೆಟ್ರೋಲ್ ಬಂಕ್ ಹಾಗೂ ಗ್ಯಾಸ್ ಏಜೆನ್ಸಿಯಲ್ಲಿ ಪ್ರಥಮ ಪ್ರಾಶಸ್ತ್ಯ ಯೋಚನೆ ಕೇಂದ್ರ ಸರಕಾರದ ಮುಂದಿದೆ. ಅಲ್ಲದೆ ಸಹಕಾರಿ ಸಂಸ್ಥೆಗಳ ಮೂಲಕ ವೊಲ್ವೋ ಸಹಿತ ಸಾರಿಗೆ ವ್ಯವಸ್ಥೆ ಮುನ್ನಡೆಸಲು ಯೋಜಿಸಲಾಗಿದೆ ಎಂದ್ರು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಸಿಎ ಜಿ.ನಂಜನಗೌಡ ವಹಿಸಿದ್ರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…