ಪ್ರಸ್ತುತ ಭಾರತದಲ್ಲಿ ಒಂದಲ್ಲ ಒಂದು ಕಾರಣಕ್ಕೆ 30ಕೋಟಿ ಮಂದಿ ಸಹಕಾರಿ ಕ್ಷೇತ್ರದ ಸದಸ್ಯತ್ವವನ್ನು ಹೊಂದಿದ್ದಾರೆ.
ಮುಂದಿನ 5-10ವರ್ಷಗಳಲ್ಲಿ ಈ ಸಂಖ್ಯೆ ದುಪ್ಪಟ್ಟು ಆಗಿ, ನಮ್ಮ ದೇಶದ ಒಟ್ಟು ಜನಸಂಖ್ಯೆಯ ಶೇ.50ರಷ್ಟು ಮಂದಿ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆದುದರಿಂದ ದೇಶದ ಮುಂದಿನ ಭವಿಷ್ಯ ಸಹಕಾರಿ ಕ್ಷೇತ್ರದ ಕೈಯಲ್ಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ರಾಜ್ಯದ ಸೌಹಾರ್ದ ಸಹಕಾರಿಗಳ ಸಾಮಾನ್ಯ ಸೇವಾ ಕೇಂದ್ರಗಳ ಉದ್ಘಾಟನೆಯನ್ನು ಉಡುಪಿಯ ಹೊಟೇಲ್ ಡಯಾನ ಸಭಾಂಗಣದಲ್ಲಿ ನೆರವೇರಿಸಿ ಅವರು ಮಾತನಾಡಿದ್ರು. ಭಾರತದಲ್ಲಿ ಸಹಕಾರಿ ಕ್ಷೇತ್ರ ಸಾಕಷ್ಟು ವಿಸ್ತಾರವಾಗಿ ಬೆಳೆಯುತ್ತಿದ್ದು, ಮುಂದೆ ಇಡೀ ಆಡಳಿತ ವ್ಯವಸ್ಥೆಯೇ ಸಹಕಾರಿ ಕ್ಷೇತ್ರದ ಮೂಲಕ ನಡೆಯುವ ಸಾಧ್ಯತೆ ಇದೆ. ಅದೇ ರೀತಿ ಸಹಕಾರಿ ಸಂಸ್ಥೆಗಳಿಗೆ ಪೆಟ್ರೋಲ್ ಬಂಕ್ ಹಾಗೂ ಗ್ಯಾಸ್ ಏಜೆನ್ಸಿಯಲ್ಲಿ ಪ್ರಥಮ ಪ್ರಾಶಸ್ತ್ಯ ಯೋಚನೆ ಕೇಂದ್ರ ಸರಕಾರದ ಮುಂದಿದೆ. ಅಲ್ಲದೆ ಸಹಕಾರಿ ಸಂಸ್ಥೆಗಳ ಮೂಲಕ ವೊಲ್ವೋ ಸಹಿತ ಸಾರಿಗೆ ವ್ಯವಸ್ಥೆ ಮುನ್ನಡೆಸಲು ಯೋಜಿಸಲಾಗಿದೆ ಎಂದ್ರು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಸಿಎ ಜಿ.ನಂಜನಗೌಡ ವಹಿಸಿದ್ರು.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…