ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಜೂ.25ರಿಂದ ಉಚಿತ ಸಹಜ ಯೋಗ ಧ್ಯಾನೋತ್ಸವ

ಉಡುಪಿ ಜಿಲ್ಲೆಯಲ್ಲಿ ಉಚಿತ ಸಹಜ ಯೋಗ ಧ್ಯಾನೋತ್ಸವ ಜೂ.25ರಿಂದ 29ರವರೆಗೆ ನಡೆಯಲಿದೆ ಎಂದು ಪದ್ಮಾ ಗಂಗಾಧರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೂ.25ರಂದು ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ, ಜೂ.26ರಂದು ಶ್ರೀಕೃಷ್ಣ ಮಠದ ರಾಜಾಂಗಣ, ಸಂಜೆ 6ರಿಂದ 9ರವರೆಗೆ ಬೈಲೂರು ಮಹಿಷಮರ್ದಿನಿ ದೇವಸ್ಥಾನ, ಜೂ.28ರಂದು ಬೆಳಗ್ಗೆ 9ರಿಂದ ಸಂಜೆ 9ರ ವರೆಗೆ ಅಜ್ಜರಕಾಡು ಪುರಭವನ ಹಾಗೂ ಜೂ.29ರಂದು ಫಿಶರೀಸ್ ಸಭಾಭವನದಲ್ಲಿ ನಡೆಯಲಿದೆ ಎಂದ್ರು. ಸಹಜ ಯೋಗದಿಂದ ಏಕಾಗ್ರತೆ ಹಾಗೂ ಸೃಜನಶೀಲತೆ ಹೆಚ್ಚಳವಾಗಲಿದೆ. ದಿನನಿತ್ಯದ ಒತ್ತಡಗಳ ನಡುವೆ ಮನಸ್ಸು ಸ್ಥಿರವಾಗಿರಲಿದೆ. ರೋಗ ನಿರೋಧಕ ಶಕ್ತಿ ಬಲಪಡಿಸುವ ಜತೆಗೆ ಶಾಂತಿ ಹಾಗೂ ಸಂತೋಷದ ಅನುಭವ ನೀಡುತ್ತದೆ. ಸಹಾನುಭೂತಿ, ಸಹನೆ ಮತ್ತು ದೆಯಂತಹ ಗುಣಗಳನ್ನು ವೃದ್ಧಿಸುತ್ತದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಉಡುಪಿ ಸೆಂಟರ್ ಅಧ್ಯಕ್ಷ ವಿಷ್ಣುಮೂರ್ತಿ ಉಡುಪ, ಕಾರ್ಯಕರ್ತರಾದ ನವೀನ್ ಶೆಟ್ಟಿ, ಗೋವರ್ಧನ ತಿಂಗಳಾಯ, ಅಭಿಷೇಕ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!