ಉಡುಪಿ ಜಿಲ್ಲೆಯಲ್ಲಿ ಉಚಿತ ಸಹಜ ಯೋಗ ಧ್ಯಾನೋತ್ಸವ ಜೂ.25ರಿಂದ 29ರವರೆಗೆ ನಡೆಯಲಿದೆ ಎಂದು ಪದ್ಮಾ ಗಂಗಾಧರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೂ.25ರಂದು ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ, ಜೂ.26ರಂದು ಶ್ರೀಕೃಷ್ಣ ಮಠದ ರಾಜಾಂಗಣ, ಸಂಜೆ 6ರಿಂದ 9ರವರೆಗೆ ಬೈಲೂರು ಮಹಿಷಮರ್ದಿನಿ ದೇವಸ್ಥಾನ, ಜೂ.28ರಂದು ಬೆಳಗ್ಗೆ 9ರಿಂದ ಸಂಜೆ 9ರ ವರೆಗೆ ಅಜ್ಜರಕಾಡು ಪುರಭವನ ಹಾಗೂ ಜೂ.29ರಂದು ಫಿಶರೀಸ್ ಸಭಾಭವನದಲ್ಲಿ ನಡೆಯಲಿದೆ ಎಂದ್ರು. ಸಹಜ ಯೋಗದಿಂದ ಏಕಾಗ್ರತೆ ಹಾಗೂ ಸೃಜನಶೀಲತೆ ಹೆಚ್ಚಳವಾಗಲಿದೆ. ದಿನನಿತ್ಯದ ಒತ್ತಡಗಳ ನಡುವೆ ಮನಸ್ಸು ಸ್ಥಿರವಾಗಿರಲಿದೆ. ರೋಗ ನಿರೋಧಕ ಶಕ್ತಿ ಬಲಪಡಿಸುವ ಜತೆಗೆ ಶಾಂತಿ ಹಾಗೂ ಸಂತೋಷದ ಅನುಭವ ನೀಡುತ್ತದೆ. ಸಹಾನುಭೂತಿ, ಸಹನೆ ಮತ್ತು ದೆಯಂತಹ ಗುಣಗಳನ್ನು ವೃದ್ಧಿಸುತ್ತದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಉಡುಪಿ ಸೆಂಟರ್ ಅಧ್ಯಕ್ಷ ವಿಷ್ಣುಮೂರ್ತಿ ಉಡುಪ, ಕಾರ್ಯಕರ್ತರಾದ ನವೀನ್ ಶೆಟ್ಟಿ, ಗೋವರ್ಧನ ತಿಂಗಳಾಯ, ಅಭಿಷೇಕ್ ಉಪಸ್ಥಿತರಿದ್ರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…