ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಕೇಪು ಗ್ರಾಮ ಪಂಚಾಯತ್ ಕಛೇರಿ ಎದುರುಗಡೆ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತಾನಾಡಿದ ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಪಂಚಾಯತ್ ವ್ಯವಸ್ಥೆಯನ್ನು ಬುಡಮೇಲುಗೊಳಿಸುವ ಷಡ್ಯಂತ್ರವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಹಾಗೂ ಪಂಚಾಯತಿಗೆ ನೀಡುವ ಕೆಲವೊಂದು ಸವಲತ್ತುಗಳನ್ನು ಕಡಿತಗೊಳಿಸುವ ಮೂಲಕ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ರಾಜ್ಯ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿರುವ ಈ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳಿಗೆ ಇರಾನ್ ಮತ್ತು ಇಸ್ರೇಲ್ ಯುದ್ಧದ ಬಗ್ಗೆ ಚಿಂತಿತರಾಗಿದ್ದಾರೆ ಎಂದು ಹೇಳಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ಧನ್ ಭಟ್ ಮಾತಾಡಿ ಸರಕಾರ ಜನಸಾಮಾನ್ಯರಿಗೆ ಸಹಕಾರ ನೀಡುವುದನ್ನು ಬಿಟ್ಟು ದ್ರೋಹವನ್ನು ಮಾಡುತ್ತಿದೆ. ಕೇಪು ಗ್ರಾಮ ಪಂಚಾಯತು ಅಧ್ಯಕ್ಷರಾದ ರಾಘವ ಮಣಿಯಾಣಿ ಮಾತಾನಾಡಿ, ಪಂಚಾಯತಿಗೆ ಈ ಹಿಂದೆ ಬಿಜೆಪಿ ಸರಕಾರ ನೀಡುತ್ತಿದ್ದ ಆಶ್ರಯ ಯೋಜನೆಯ ಮನೆ, ಪ್ರಾಕೃತಿಕ ವಿಕೋಪ ಸಂಭವಿಸಿದಾಗ ನೀಡುವ ಪರಿಹಾರವನ್ನು ಕಡಿತಗೊಳಿಸಲಾಗಿದೆ ಹಾಗೂ ಸಿಬ್ಬಂದಿಗಳಿಗೂ ವೇತನ ನೀಡಲು ಈ ಸರಕಾರದಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…