ಗೇಮ್ ಈಸ್ ನಾಟ್ ಓವರ್?.. ಇದು ನಿನ್ನೆ ಇರಾನ್ ಕೈಗೊಂಡಿದ್ದ ರಣಪ್ರತಿಜ್ಞೆ. ಶಕ್ತಿಶಾಲಿ ಪರಮಾಣು ನೆಲೆಗಳನ್ನು ಧ್ವಂಸ ಮಾಡಿ ಗಹಗಹಿಸಿದ್ದ ಅಮೆರಿಕಕ್ಕೆ ಸವಾಲೆಸೆದಿದ್ದ ಇರಾನ್.
ಇನ್ನೂ ಆಟ ಮುಗಿದಿಲ್ಲ, ಯಾರನ್ನೂ ಬಿಡುವ ಮಾತೇ ಇಲ್ಲ ಅಂತ ಶಪಥಗೈದಿತ್ತು. ಇವತ್ತು ಕೆಣಕಿದ ದೊಡ್ಡಣ್ಣನ ಮೇಲೆ ದಾಳಿ ಮಾಡುವ ಮೂಲಕ ಇರಾನ್ ನನಗ್ಯಾರ ಭಯವಿಲ್ಲ ಅಂತ ಎದೆಯೊಡ್ಡಿದೆ. ಇದರ ಬೆನ್ನಲ್ಲೇ ಟ್ರಂಪ್, ಇರಾನ್ ಮತ್ತು ಇಸ್ರೇಲ್ ಕದನ ವಿರಾಮ ಘೋಷಿಸಿವೆ ಎಂದು ಹೇಳಿಕೊಂಡಿದ್ದಾರೆ. ಆದರೆ ಟ್ರಂಪ್ ಹೇಳಿಕೆಯನ್ನು ಇರಾನ್ ತಿರಸ್ಕರಿಸಿದೆ. ಅಮೆರಿಕ ಏಟಿಗೆ ಇರಾನ್ ಎದುರೇಟು.. ಅಮೆರಿಕ ವಾಯುನೆಲೆಗಳ ಮೇಲೆ ತೂಫಾನ್ಗಳಂತೆ ತೂರಿಬಂದ ಮಿಸೈಲ್ಗಳು. ರಾತ್ರಿ ಆಕಾಶದಲ್ಲಿ ಬಾಂಬ್ಗಳ ಸುರಿಮಳೆ.. ಹೆದರಿ ಕಕ್ಕಾಬಿಕ್ಕಿಯಾಗಿ ಓಡಿದ ನಾಗರಿಕರು. ಪ್ರತೀಕಾರ ತೀರಿಸಿಕೊಳ್ಳುವ ಶಪಥ ಮಾಡಿದಂತೆ ಅಮೆರಿಕ ವಿರುದ್ಧ ಇರಾನ್ ಯುದ್ಧ ಆರಂಭಿಸಿದೆ. ಆಪರೇಷನ್ ಬಷಯೇರ್ ಅಲ್ ಫತಾಹ್ ಅಂದ್ರೆ ಟೈಡಿಂಗ್ ಆಫ್ ವಿಕ್ಟರಿ ಅನ್ನೋ ಹೆಸರಲ್ಲಿ ಇರಾನ್ ದಾಳಿ ನಡೆಸಿದೆ. ಕತಾರ್ ಕ್ಯಾಪಿಟಲ್ ದೋಹಾದಲ್ಲಿರುವ ಅಲ್ ಉದೈದ್ ಏರ್ಬೇಸ್ ಟಾರ್ಗೆಟ್ ಮಾಡಿದೆ. ಸೇನಾ ನೆಲೆಗಳ ಮೇಲೆ ಇರಾನ್ 6 ಖಂಡಾಂತರ ಕ್ಷಿಪಣಿಗಳ ದಾಳಿ ನಡೆಸಿದೆ. ಜನ ಪ್ರಾಣಭಯದಿಂದ ಓಡಿದ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…