ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ದೇರಾಜೆ ಘಟನೆಗೆ ಸಂಬಂಧ ಸುಳ್ಳು ಸುದ್ದಿ ಪ್ರಸಾರ: ನ್ಯೂಸ್ ವೆಬ್ ಪೋರ್ಟಲ್ ವಿರುದ್ದ ಕಠಿಣ ಕ್ರಮ

ಸಜಿಪನಡು ಗ್ರಾಮದ ದೇರಾಜೆಯಲ್ಲಿ ಇತ್ತೀಚೆಗೆ ನಡೆದ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಮತ್ತೊಂದು ಆನ್ ಲೈನ್ ನ್ಯೂಸ್ ವೆಬ್ ಪೋರ್ಟಲ್ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಡಿನಾಡ ಧ್ವನಿ. ಆನ್ ಲೈನ್ ಎಂಬ ವೆಬ್ ನ್ಯೂಸ್ ಚಾನಲ್ ವೊಂದರಲ್ಲಿ ಕರಾವಳಿಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ ಎಂಬ ತಲೆಬರಹವಿರುವ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿದ್ದು, ಸದ್ರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಸಾರ್ವಜನಿಕ ವಲಯದಲ್ಲಿ ಭಯ ಬೀತಿಯನ್ನುಂಟು ಮಾಡಿದ ವೆಬ್ ನ್ಯೂಸ್ ಚಾನಲ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೂನ್ 24 ರಂದು ಅಪರಾಧ ಕ್ರಮಾಂಕ 80/2025, ಕಲಂ 240 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸುಳ್ಳು ಸುದ್ದಿ ಪ್ರಸಾರ ಮಾಡುವವರ ವಿರುದ್ದ ಮುಂದಿನ ದಿನಗಳಲ್ಲೂ ಕಾನೂನು ಕ್ರಮ ಮುಂದುವರಿಯಲಿದೆ ಎಂದು ದ.ಕ.ಜಿಲ್ಲಾ ವರಿಷ್ಠಾಧಿಕಾರಿ ಕೆ ಅರುಣ್ ಅವರು ತಿಳಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಪ್ರಸಾರದ ಆರೋಪದಲ್ಲಿ ಜೂನ್ 21ರಂದು ಡಿ ಟಿವಿ ಕನ್ನಡ ಎಂಬ ನ್ಯೂಸ್ ಚಾನಲ್ ಲಿಂಕ್ ವಿರುದ್ದವೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.

 

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!