ಅರ್ಥಿಕ ಹೊರೆಯಿಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೋಡಿಕಲ್ನಲ್ಲಿ ಜೂ. 24 ರಂದು ಮಂಗಳವಾರ ನಡೆದಿದೆ.
ಮೃತ ಯುವಕ ಕೋಡಿಕಲ್ ನ ನಿವಾಸಿ ನಿಖಿಲ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಯುವಕ ಮನೆಯಲ್ಲಿ ಉಪಹಾರ ಸೇವಿಸಿ ಕೋಣೆಗೆ ಹೋಗಿದ್ದ. ಈತ ಸಂಜೆ ಮಲಗುವ ಅಭ್ಯಾಸ ಹೊಂದಿದರಿ0ದ್ದ ಮನೆಯವರು ಆತನ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ. ಸಂಜೆಯಾದರೂ ಕೋಣೆಯಿಂದ ಹೊರಬಾರದ ಹಿನ್ನೆಲೆ ಮನೆಯವರು ಬಾಗಿಲು ಬಡಿದರೂ, ಕರೆದರೂ ಪ್ರತಿಕ್ರಿಯೆ ಬಂದಿರಲಿಲ್ಲ. ನಂತರ ರಾತ್ರಿ 8.15ರ ವೇಳೆಗೆ ಬಾಗಿಲಿನ ಎಡೆಯಿಂದ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಪ್ರಾಥಮಿಕ ತನಿಖೆಯಿಂದ ಅರ್ಥಿಕ ಹೊರೆಯಿಂದ ಮೃತಪಟ್ಟಿರುವ ಬಗ್ಗೆ ಶಂಕಿಸಲಾಗಿದೆ. ಈತ ವಿವಿಧ ಆಪ್ ಗಳಲ್ಲಿ ಸಾಲ ಪಡೆದಿದ್ದು, ಹಿಂತಿರುಗಿಸಲು ಸಾಧ್ಯವಾಗದೆ ಸಾವಿಗೆ ಶರಣಾದ ಎನ್ನಲಾಗಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…