ಸಮಾಜದಲ್ಲಿ ಮಂಗಳಮುಖಿಯರೆಂದರೆ ತಾತ್ಸಾರದಿಂದ ಕಾಣುವವರೇ ಹೆಚ್ಚು. ಹಾಗಾಗಿ ಅವರು ಪ್ರತಿ ಹೆಜ್ಜೆಯಲ್ಲಿಯೂ ಅವಮಾನ ಅನುಭವಿಸುತ್ತಿದ್ದಾರೆ.
ಇದೇ ರೀತಿ ಮನೆಗೆ ಹೋಗಲು ರಿಕ್ಷಾದವರು ತನ್ನನ್ನು ಹತ್ತಿಸಿಕೊಳ್ಳಲಿಲ್ಲ ಎಂದು ಅವಮಾನಗೊಂಡ ಮಂಗಳಮುಖಿಯೊಬ್ಬರು ನಾಲ್ಕು ರಿಕ್ಷಾ ಖರೀದಿಸಿ ಬಾಡಿಗೆಗೆ ನೀಡುತ್ತಿದ್ದಾರೆ. ಅನಿ ಮಂಗಳೂರು ಎಂಬ ಸ್ವಾಭಿಮಾನದ ಮಂಗಳಮುಖಿ ಮೂಲತಃ ರಾಯಚೂರಿನವರು. ಮಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಬಂದ ಇವರು ಇದೀಗ ಇಲ್ಲಿಯೇ ನೆಲೆ ನಿಂತಿದ್ದಾರೆ. ಬಿಎ ಬಳಿಕ ಬಿಎಡ್ ಎರಡು ಸೆಮಿಸ್ಟರ್ ಬರೆದ ಇವರು ಮಂಗಳಮುಖಿಯರಿಗೆ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಕಷ್ಟ ಎಂದು ಅರಿತು ಶಿಕ್ಷಣವನ್ನು ಮೊಟಕುಗೊಳಿಸಿದ್ರು. ಜೀವನದಲ್ಲಿ ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ. ಈ ಅವಮಾನಗಳೇ ರಿಕ್ಷಾ ಖರೀದಿಗೆ ಪ್ರೇರಣೆಯಾಗಿದೆ ಎಂದಿದ್ದಾರೆ ಅನಿ ಮಂಗಳೂರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…