ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ಎನ್ಐಎ ಕಸ್ಟಡಿಗೆ ನೀಡಿದೆ.
ಪ್ರಕರಣ ಸಂಬಂಧ ಎನ್ಐಎ ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್ಐಎ ಎಸ್ಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ ಜುಲೈ 1ರವರೆಗೆ ಆರೋಪಿಗಳನ್ನು ಎನ್ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಲಾಗಿತ್ತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…