ಓದಿನಲ್ಲಿ ವಿಪರೀತ ಒತ್ತಡಕ್ಕೊಳಗಾಗಿ, ತಲೆನೋವಿನಿಂದ ಬಳಲುತ್ತಿದ್ದ ಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ತಲಪಾಡಿ ದೇವಿಪುರದ ಶಾರದಾ ವಿದ್ಯಾಲಯದ ಆವರಣದ ಸಿಬ್ಬಂದಿ ವಸತಿ ಗೃಹದಲ್ಲಿ ನಡೆದಿದೆ.
ಮಂಗಳೂರು ಬೆಂದೂರ್ ವೆಲ್ ನ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಸಾಲಿನ ಬಿಎ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿ ಶ್ರೇಯಾ ಆತ್ಮಹತ್ಯೆಗೈದ ವಿದ್ಯಾರ್ಥಿನಿಯಾಗಿದ್ದಾರೆ. ತಲಪಾಡಿ ನಾರ್ಲ ನಿವಾಸಿಯಾದ ಶ್ರೇಯಾ, ತಾಯಿ ಪುಷ್ಪಲತಾ ಅವರು ದೇವಿಪುರದ ಶಾರದಾ ವಿದ್ಯಾಲಯದಲ್ಲಿ ಅಟೆಂಡರ್ ಕೆಲಸದಲ್ಲಿದ್ದು ಸಂಸ್ಥೆಯ ವಸತಿ ಗೃಹದಲ್ಲೇ ಗಂಡ ಮತ್ತು ಮಕ್ಕಳ ಜೊತೆಯಲ್ಲಿ ನೆಲೆಸಿದ್ರು. ಶ್ರೇಯಾ ಎಂದಿನಂತೆ ಬೆಳಗ್ಗೆಯೂ ಕಾಲೇಜಿಗೆ ತೆರಳಿ, ಸಂಜೆ ಶ್ರೇಯಾ ತಂಗಿ ಶಾಲೆ ಮುಗಿಸಿ ಮನೆಗೆ ಬಂದಾಗ ಮನೆಯ ಬಾಗಿಲು ತೆರೆದಿದ್ದು, ಒಳಗೆ ನೋಡಿದಾಗ ಮನೆಯ ಬೆಡ್ ರೂಂನ ಕಿಟಕಿಗೆ ಶ್ರೇಯ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ. ಸಾವಿಗೂ ಮುನ್ನ ಶ್ರೇಯಾ ಬರೆದಿರುವ ಡೆತ್ ನೋಟ್ ಪೊಲೀಸರಿಗೆ ದೊರೆತಿದ್ದು, ಓದಿನಲ್ಲಿ ಕಳೆದ ಎರಡು ತಿಂಗಳಿನಿಂದ ವಿಪರೀತ ಒತ್ತಡ ಎದುರಿಸುತ್ತಿದ್ದು, ಸಹಿಸದ ತಲೆ ನೋವಿನಿಂದ ಬಳುತ್ತಿದ್ದೇನೆಂದು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…